ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 58 ನೇ ಸಭೆಯಲ್ಲಿ ಒಟ್ಟು 11,513 ಕೋಟಿ ರೂ.ಗಳ 10 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 46,984 ಉದ್ಯೋಗ ಸೃಜನೆಯಾಗುವ ನಿರೀಕ್ಷೆ ಇದೆ.
ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಪಗುತ್ತಿಗೆ ಮತ್ತು ಗುತ್ತಿಗೆಯ ಅವಧಿಯನ್ನು ಮಿತಿಮೀರಿ ವಿಸ್ತರಿಸಬಾರದು. ಈ ಬಗ್ಗೆ ಸ್ಪಷ್ಟ ನಿಯಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಕೈಗಾರಿಕೆಗಳಿಗೆ ನೀಡಲಾಗಿರುವ ಜಮೀನು ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ವಿದ್ಯುತ್ ಹಾಗೂ ಸ್ಟೀಲ್ ಯೋಜನೆಗಳಿಗೆ ಸಂಬಂಧಿಸಿದ ಕೈಗಾರಿಕೆಗಳಲ್ಲಿ ನೀರಿನ ಬಳಕೆಯ ಪ್ರಮಾಣ ಹೆಚ್ಚಿರುತ್ತದೆ. ಕೈಗಾರಿಕೆಗಳಲ್ಲಿ ನೀರಿನ ಬಳಕೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.
10-20 ವರ್ಷಗಳ ಹಿಂದೆ ಸ್ಥಳ ಮಂಜೂರಾತಿ ಮಾಡಿಸಿಕೊಂಡಿದ್ದರೂ ಯೋಜನೆಗೆ ಬಳಕೆಯಾಗದೆ ಉಳಿದುಕೊಂಡಿರುವ ಕೈಗಾರಿಕೆಗಳಿವೆ. ಇದನ್ನು ಬೇರೆಯವರಿಗೆ ಕೊಡಲೂ ಸಾಧ್ಯವಿಲ್ಲದ ಸ್ಥಿತಿ ಇದೆ. ಈ ಬಗ್ಗೆ ಕೂಡಲೇ ಪರಿಶೀಲಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಪರಿಶೀಲನೆಗಾಗಿ ಪ್ರತ್ಯೇಕವಾಗಿ ಸಭೆ ಕರೆಯುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ನವೆಂಬರ್ 2 ಮತ್ತು 3 ರಂದು ನಡೆಯಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಈ ಯೋಜನೆಗಳು ಪೂರಕವಾಗಲಿವೆ. ಭೂಮಿ ನೀರು, ವಿದ್ಯುತ್ ಮೂಲಭೂತ ಸೌಕರ್ಯ, ವಿನಾಯತಿ ನೀಡುವುದು, ಹೊಸ ಕೈಗಾರಿಕಾ ನೀತಿ 2025 ರ ಅಡಿಯಲ್ಲಿ ಯಾವ ರೀತಿ ಸೌಲಭ್ಯಗಳನ್ನು ನೀಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.