ನವದೆಹಲಿ: ರಾಷ್ಟ್ರ ರಾಜಧಾನಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿ ಮೆರವಣಿಗೆ ವೇಳೆ ಘರ್ಷಣೆ ಸಂಭವಿಸಿದ್ದು, ಎಂಟು ಪೊಲೀಸರು ಮತ್ತು ನಾಗರಿಕ ಗಾಯಗೊಂಡಿದ್ದರು.
ಎರಡು ಸಮುದಾಯಗಳ ನಡುವಿನ ಈ ಘರ್ಷಣೆ ಸಂಭವಿಸಿದ ನಂತರ ಭದ್ರತಾ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ಇರಿಸಿದ್ದಾರೆ.
ಜಹಾಂಗೀರ್ಪುರಿ ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಶನಿವಾರ ರಾಷ್ಟ್ರ ರಾಜಧಾನಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಘರ್ಷಣೆ ನಡೆದಿದ್ದು, ಎಂಟು ಪೊಲೀಸರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದಾರೆ.
ಜಹಾಂಗೀರ್ಪುರಿ ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಎರಡು ವಿ ಸಮುದಾಯಗಳಿಗೆ ಸೇರಿದ 23 ಜನರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ಥಾನಾ ಸೋಮವಾರ ಹೇಳಿದ್ದಾರೆ.
ಘರ್ಷಣೆಯ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗಿದ್ದು, ತನಿಖೆ ಮುಂದುವರಿಸಲು 14 ತಂಡಗಳನ್ನು ರಚಿಸಲಾಗಿದೆ. ನಾಲ್ಕು ವಿಧಿವಿಜ್ಞಾನ ತಂಡಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.
ಡಿಜಿಟಲ್ ಪುರಾವೆಗಳ ಸಂಪೂರ್ಣ ಮತ್ತು ವಿವರವಾದ ವಿಶ್ಲೇಷಣೆ ಮಾಡುವ ಮೂಲಕ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಗುರುತಿಸುವ ಜವಾಬ್ದಾರಿಯನ್ನು ದೆಹಲಿ ಪೊಲೀಸ್ ವಸ್ಪೆಷಲ್ ಸೆಲ್ನ ಇಂಟೆಲಿಜೆನ್ಸ್ ಫ್ಯೂಷನ್ ಆಂಡ್ ಸ್ಟ್ರಾಟೆಜಿಕ್ ಆಪರೇಷನ್ (IFSO) ಘಟಕಕ್ಕೆ ನೀಡಲಾಗಿದೆ ಮತ್ತು ಅದರ ಪ್ರಕಾರ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಸ್ತಾನಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.