ಲಕ್ನೋ: ಬಾಂಗ್ಲಾದೇಶ ಮತ್ತು ಪಾಕಿಸ್ಥಾನದಿಂದ ಹೊರಹಾಕಲ್ಪಟ್ಟ ಹಿಂದೂ ನಿರಾಶ್ರಿತರ ಕುಟುಂಬಗಳಿಗೆ ಸಹಾಯ ಮಾಡುವ ತನ್ನ ಹಿಂದಿನ ಭರವಸೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈಡೇರಿಸಿದ್ದಾರೆ. ಬಾಂಗ್ಲಾದ ಹಿಂದೂ ನಿರಾಶ್ರಿತರಿಗೆ ತನ್ನ ರಾಜ್ಯದಲ್ಲಿ ಆಶ್ರಯ ಒದಗಿಸಿದ್ದಾರೆ.
ಯೋಗಿ ಆದಿತ್ಯನಾಥ್ ಮಂಗಳವಾರ ಬಾಂಗ್ಲಾದೇಶದ 63 ಹಿಂದೂ ನಿರಾಶ್ರಿತರ ಕುಟುಂಬಗಳಿಗೆ ವಸತಿ ಮತ್ತು ಕೃಷಿ ಭೂಮಿ ಪತ್ರಗಳನ್ನು ವಿತರಿಸಿದ್ದಾರೆ.
ವರದಿಗಳ ಪ್ರಕಾರ, ಬಾಂಗ್ಲಾದೇಶದಿಂದ ಬಂದ 63 ನಿರಾಶ್ರಿತ ಕುಟುಂಬಗಳಿಗೆ ರಾಜ್ಯದ ರಾಜಧಾನಿ ಲಕ್ನೋದಲ್ಲಿ ಪುನರ್ವಸತಿ ಕಲ್ಪಿಸಲು ‘ಮುಖ್ಯಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ ಅಧಿಕೃತ ದಾಖಲೆಗಳೊಂದಿಗೆ ಕೃಷಿ ಮತ್ತು ವಸತಿ ಭೂಮಿಯನ್ನು ವಿತರಿಸಿದರು.
ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹೊರಹಾಕಲ್ಪಟ್ಟ ಹಿಂದೂಗಳಿಗೆ ಉತ್ತರ ಪ್ರದೇಶದಲ್ಲಿ ವಸತಿ ಮತ್ತು ಕೃಷಿ ಭೂಮಿ ನೀಡುವ ಮೂಲಕ ಅವರಿಗೆ ಆಶ್ರಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಹಿಂದೆ ಭರವಸೆ ನೀಡಿದ್ದರು.
ಅಂತಹ ಕುಟುಂಬಗಳಿಗೆ ಅತಿಕ್ರಮಣದಾರರಿಂದ ಮುಕ್ತಿಗೊಳಿಸಿದ ರಾಜ್ಯ ಸರ್ಕಾರದ ಭೂಮಿಯನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದರು.
ಅತಿಕ್ರಮಣದಾರರಿಂದ ಮುಕ್ತವಾಗಿರುವ ಎಲ್ಲಾ ಭೂಮಿಯನ್ನು ಭೂ ಬ್ಯಾಂಕ್ ವ್ಯಾಪ್ತಿಗೆ ತರಲಾಗುವುದು ಮತ್ತು ಈ ಭೂಮಿಯನ್ನು ಶಾಲೆಗಳು, ಕೈಗಾರಿಕೆಗಳು ಮತ್ತು ಇತರ ವ್ಯವಹಾರಗಳನ್ನು ಸ್ಥಾಪಿಸಲು ಮತ್ತು ಪಾಕಿಸ್ಥಾನ,ಬಾಂಗ್ಲಾ ದೇಶಗಳ ಹಿಂದೂ ನಿರಾಶ್ರಿತರ ಪುನರ್ವಸತಿಗಾಗಿ ಬಳಸಲಾಗುವುದು ಎಂದು ಸಿಎಂ ಯೋಗಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.