ನವದೆಹಲಿ: ಖ್ಯಾತ ಸಿನಿಮಾ ನಟರು ತಮ್ಮ ಉತ್ತಮ ನಡವಳಿಕೆಗಳ ಮೂಲಕ ಸಮಾಜಕ್ಕೆ ಮಾದರಿಯಾಗಿರಬೇಕು. ಆದರೆ ಕೆಲ ನಟರು ಹಣದ ಲಾಲಸೆಗೆ ಬಿದ್ದು ಗುಟ್ಕಾ, ಪಾನ್ ಮಸಾಲ ಮಾರಾಟ ಮಾಡುವ ಕಂಪನಿಗಳ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸರ್ಕಾರದಿಂದ ಪದ್ಮಶ್ರೀ ಪುರಸ್ಕಾರ ಪಡೆದರು ಕೂಡ ಇಂತಹ ಕಂಪನಿಗಳ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಪರ್ಯಾಸ. ಅಮಿತಾ ಬಚ್ಚನ್, ಅಕ್ಷಯ್ ಕುಮಾರ್ ಅವರಂತಹ ದಿಗ್ಗಜರು ಕೂಡ ತಂಬಾಕು ಉತ್ಪನ್ನಗಳನ್ನು ತಿನ್ನುವಂತೆ ಜನರಿಗೆ ಪ್ರೋತ್ಸಾಹ ನೀಡುತ್ತಿರುವುದು ಜನರಿಗೆ ಬೇಸರ ತರಿಸಿದೆ.
ಆದರೆ ಇಂತಹ ನಟರಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್. ಬಂಪರ್ ಮೊತ್ತದ ಹಣದ ಆಫರ್ ನೀಡಿದರೂ ಅವರು ಗುಟ್ಕಾ ಕಂಪನಿಯ ಜಾಹೀರಾತಿನಲ್ಲಿ ಭಾಗಿಯಾಗಲು ಒಪ್ಪಿಕೊಂಡಿಲ್ಲ. ತಮ್ಮ ಅಭಿಮಾನಿಗಳಿಗಾಗಿ ಅವರು ಈ ಜಾಹೀರಾತನ್ನು ಸಾರಸಗಟಾಗಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ತಾನು ತಂಬಾಕು ಸೇವಿಸುವಂತೆ ಜಾಹೀರಾತು ನೀಡಿದರೆ ತನ್ನ ಅಭಿಮಾನಿಗಳು ಗುಟ್ಕಾ ಸೇವನೆ ಆರಂಭಿಸಬಹುದು ಮತ್ತು ಅದರ ವ್ಯಸನಿಗಳಾಗಬಹುದು ಎಂಬ ಅಂಜಿಕೆ ಅವರಲ್ಲಿತ್ತು ಎನ್ನಲಾಗಿದೆ.
ಅವರ ನಿರ್ಧಾರಕ್ಕೆ ಭಾರೀ ಪ್ರಶಂಸೆಗಳು ವ್ಯಕ್ತವಾಗಿದೆ. ದಕ್ಷಿಣ ಭಾರತದ ಅನೇಕ ನಟರು ಇಂತಹ ನಿರ್ಧಾರಗಳನ್ನು ತೆಗೆದುಕೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸೌಂದರ್ಯವರ್ಧಕ ಉತ್ಪನ್ನಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಹಿಂದೆ ಸಾಯಿ ಪಲ್ಲವಿ ನಿರ್ಧಾರ ತೆಗೆದುಕೊಂಡಿದ್ದನ್ನು ಇಲ್ಲಿ ನೆನಯಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.