ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24, ಭಾನುವಾರ ಪಂಚಾಯತ್ ರಾಜ್ ದಿವಸ್ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಮಂತ್ರಿಯವರ ಭೇಟಿಗೂ ಮುನ್ನ, ಗುಪ್ತಚರ ಸಂಸ್ಥೆ ಕಣಿವೆಯಲ್ಲಿ ಸಂಭವನೀಯ ಬೆದರಿಕೆಯ ಎಚ್ಚರಿಕೆಯನ್ನು ನೀಡಿದೆ
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಈ ಹಿಂದೆ ಪ್ರಧಾನ ಮಂತ್ರಿಯವರ ಭೇಟಿಯ ತಯಾರಿಯ ಭಾಗವಾಗಿ IB, RAW ಮತ್ತು NIA ಮುಖ್ಯಸ್ಥರೊಂದಿಗೆ ನಿರ್ಣಾಯಕ ಭದ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಗುಪ್ತಚರ ಇಲಾಖೆ ಎಚ್ಚರಿಕೆ ರವಾನಿಸಿದೆ. ಅದರ ಪ್ರಕಾರ, ಗಡಿಯಾಚೆಗಿನ ದುಷ್ಕರ್ಮಿಗಳಿಂದ ಸಮಸ್ಯೆಗಳ ಸಾಧ್ಯತೆ ಹೆಚ್ಚಾಗಿದೆ. ಎಚ್ಚರಿಕೆಗೆ ಪ್ರತಿಕ್ರಿಯಿಕೆಯಾಗಿ ಜಮ್ಮು-ಕಾಶ್ಮೀರ ಪೊಲೀಸರು ತಮ್ಮ ಬಿಕ್ಕಟ್ಟು ಪ್ರತಿಕ್ರಿಯೆ ತಂಡವನ್ನು ಗಡಿ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.
ಸಂಭವನೀಯ ಭಯೋತ್ಪಾದಕ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಈ ವಾರಾಂತ್ಯದಲ್ಲಿ ಪ್ರಧಾನಿ ಭೇಟಿಗೆ ಮುನ್ನ ಶತ್ರುಗಳ ಯಾವುದೇ ಪ್ರಯತ್ನವನ್ನು ವಿಫಲಗೊಳಿಸಲು ಭದ್ರತಾ ಪಡೆಗಳು ಕೂಡ ಸಜ್ಜಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.