ನವದೆಹಲಿ: ಮಹಾರಾಷ್ಟ್ರದ ಸ್ಥಳೀಯ ದೇವಾಲಯಗಳಲ್ಲಿ ಮೇ 3 ರಂದು ಅಕ್ಷಯ ತೃತಿಯ ಸಂದರ್ಭದಲ್ಲಿ ಧ್ವನಿವರ್ಧಕಗಳನ್ನು ಬಳಸಿ ‘ಮಹಾ ಆರತಿ’ ಮಾಡಲು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ನಿರ್ಧರಿಸಿದ್ದಾರೆ. ಎಂಎನ್ಎಸ್ ಪಕ್ಷದ ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಂಗಳವಾರ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡುವ ಕುರಿತು ಮುಂಬೈ, ಥಾಣೆ, ನಾಸಿಕ್ ಮತ್ತು ಇತರ ವಿಭಾಗಗಳ ನಾಯಕರ ಸಭೆ ನಡೆಸಿದ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
“ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾರ್ಯಕರ್ತರು ಮೇ 3 ರಂದು ಅಕ್ಷಯ ತೃತೀಯ ಸಂದರ್ಭದಲ್ಲಿ ರಾಜ್ಯದಾದ್ಯಂತ ತಮ್ಮ ಸ್ಥಳೀಯ ದೇವಸ್ಥಾನಗಳಲ್ಲಿ ‘ಮಹಾ ಆರತಿ’ ಮಾಡುತ್ತಾರೆ. ಧ್ವನಿವರ್ಧಕಗಳನ್ನು ಬಳಸಿ ‘ಆರತಿ’ ನಡೆಸಲಾಗುವುದು” ಎಂದು ಎಂಎನ್ಎಸ್ ನಾಯಕ ನಿತಿನ್ ಸರ್ದೇಸಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಧ್ವನಿವರ್ಧಕ ಗದ್ದಲದ ಹಿನ್ನೆಲೆಯಲ್ಲಿ ಠಾಕ್ರೆ ಅವರು ಭಾನುವಾರ ಮಾತನಾಡಿ, ದೇಶದ ಮುಸ್ಲಿಮರು ಧರ್ಮವು ಕಾನೂನು ಮತ್ತು ದೇಶಕ್ಕಿಂತ ಮೇಲಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದಿದ್ದಾರೆ.
“ನಮಗೆ ಮಹಾರಾಷ್ಟ್ರದಲ್ಲಿ ಗಲಭೆ ಬೇಡ, ಪ್ರಾರ್ಥನೆಯನ್ನು ಯಾರೂ ವಿರೋಧಿಸಿಲ್ಲ, ನಮಗೆ ಕೇವಲ ಮಸೀದಿಗಳಲ್ಲಿ ಹಾಕಲಾಗಿರುವ ಮತ್ತು ಇಡೀ ದೇಶದಲ್ಲಿ ಕಾನೂನುಬಾಹಿರವಾಗಿರುವ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು, ನೀವು ಪ್ರಾರ್ಥನೆ ಧ್ವನಿವರ್ಧಕದಲ್ಲಿ ಮಾಡಿದರೆ, ನಾವು ಕೂಡ ಧ್ವನಿವರ್ಧಕಗಳನ್ನು ಬಳಸುತ್ತೇವೆ. ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು” ಎಂದು ಠಾಕ್ರೆ ಹೇಳಿದರು.
ಮೇ 3 ರೊಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಹಬೇಕು ಎಚ್ಚರಿಕೆಯನ್ನು ಎಂಎನ್ಎಸ್ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಗೃಹ ಇಲಾಖೆ ಸೋಮವಾರ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ಸರಿಯಾದ ಅನುಮತಿಯೊಂದಿಗೆ ಮಾತ್ರ ಬಳಸಬೇಕು ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.