ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರ ಉಪಸ್ಥಿತಿಯಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಭಾರತವು ಸಾಂಪ್ರದಾಯಿಕ ಔಷಧದ ಲಾಭ ಪಡೆಯಲು ದೇಶಕ್ಕೆ ಬರಲು ಬಯಸುವ ವಿದೇಶಿ ಪ್ರಜೆಗಳಿಗೆ ವಿಶೇಷ ಆಯುಷ್ ವೀಸಾ ಕೆಟಗರಿಯನ್ನು ಪರಿಚಯಿಸಲಿದೆ ಎಂದು ಹೇಳಿದರು.
ಸಾಂಪ್ರದಾಯಿಕ ಔಷಧಕ್ಕಾಗಿನ ವಿದೇಶಿ ಪ್ರಜೆಗಳ ಹೆಚ್ಚುತ್ತಿರುವ ಬೇಡಿಕೆಯನ್ನು ಈಡೇರಿಸಲಾಗುವುದು ಎಂದ ಮೋದಿ, ಶೀಘ್ರದಲ್ಲೇ, ಆಯುಷ್ ಚಿಕಿತ್ಸೆಯ ಲಾಭವನ್ನು ಪಡೆಯಲು ಭಾರತಕ್ಕೆ ಬರಲು ಬಯಸುವ ವಿದೇಶಿ ಪ್ರಜೆಗಳಿಗೆ ಭಾರತವು ವಿಶೇಷ ಆಯುಷ್ ವೀಸಾ ಕೆಟಗರಿಯನ್ನು ಪರಿಚಯಿಸಲಿದೆ ಎಂದರು.
“ಆಯುಷ್ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಆವಿಷ್ಕಾರದ ಸಾಧ್ಯತೆಗಳು ಅಪರಿಮಿತವಾಗಿವೆ. ನಾವು ಈಗಾಗಲೇ ಆಯುಷ್ ಔಷಧಿಗಳು, ಪೂರಕಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆಯಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ನೋಡುತ್ತಿದ್ದೇವೆ” ಎಂದರು.
“ನಾವು ವಿಶೇಷ ಆಯುಷ್ ಹಾಲ್ಮಾರ್ಕ್ ಅನ್ನು ತರಲಿದ್ದೇವೆ. ಈ ಹಾಲ್ಮಾರ್ಕ್ ಅನ್ನು ಭಾರತದಲ್ಲಿ ತಯಾರಿಸಿದ ಅತ್ಯುನ್ನತ ಗುಣಮಟ್ಟದ ಆಯುಷ್ ಉತ್ಪನ್ನಗಳಿಗೆ ಅನ್ವಯಿಸಲಾಗುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಔಷಧೀಯ ಸಸ್ಯಗಳನ್ನು ಬೆಳೆಯುವ ರೈತರು ಮಾರುಕಟ್ಟೆಯೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸುವ ಸೌಲಭ್ಯವನ್ನು ಪಡೆಯುವುದು ಬಹಳ ಮುಖ್ಯ, ಇದಕ್ಕಾಗಿ ಸರ್ಕಾರವು ಆಯುಷ್ ಇ-ಮಾರುಕಟ್ಟೆಯ ಆಧುನೀಕರಣ ಮತ್ತು ವಿಸ್ತರಣೆಗೆ ಕೆಲಸ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.
“ಈ ವರ್ಷ ಇಲ್ಲಿಯವರೆಗೆ, 14 ಸ್ಟಾರ್ಟ್ಅಪ್ಗಳು ಯುನಿಕಾರ್ನ್ ಕ್ಲಬ್ಗೆ ಸೇರ್ಪಡೆಗೊಂಡಿವೆ. ಆಯುಷ್ ಪರಿಸರ ವ್ಯವಸ್ಥೆಯ ಯುನಿಕಾರ್ನ್ಗಳು ಶೀಘ್ರದಲ್ಲೇ ಹೊರಹೊಮ್ಮುತ್ತವೆ ಎಂದು ನನಗೆ ವಿಶ್ವಾಸವಿದೆ” ಎಂದು ಪ್ರಧಾನಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.