ನವದೆಹಲಿ: ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ನಾವೀನ್ಯತೆಯನ್ನು ಉತ್ತೇಜಿಸಲು ಸರ್ಕಾರದ ಬೆಂಬಲದೊಂದಿಗಿನ ದೀರ್ಘಾವಧಿಯ ಕಾರ್ಯತಂತ್ರದ ಹೂಡಿಕೆಗಳು ನಿರ್ಣಾಯಕವಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಘೆಬ್ರೆಯೆಸಸ್ ಹೇಳಿದ್ದಾರೆ.
“ಬೆಳೆಯುತ್ತಿರುವ ಆಯುಷ್ ಕ್ಷೇತ್ರದ ಮೂಲಕ ಭಾರತ ಇಡೀ ಜಗತ್ತನ್ನು ತಲುಪುತ್ತದೆ ಮತ್ತು ಇಡೀ ಜಗತ್ತು ಭಾರತಕ್ಕೆ ಬರುತ್ತದೆ ಎಂದು ಅವರು ಹೇಳಿದರು.
ಗುಜರಾತ್ನ ಮಹಾತ್ಮ ಮಂದಿರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾಮಾನ್ಯವಾಗಿ ಆರೋಗ್ಯಕ್ಕಾಗಿ ಮತ್ತು ವಿಶೇಷವಾಗಿ ಸಾಂಪ್ರದಾಯಿಕ ಔಷಧಕ್ಕಾಗಿ ನಾವೀನ್ಯತೆ ಪರಿಸರ ವ್ಯವಸ್ಥೆಯನ್ನು ಬೆಂಬಲಿಸುವ ಅಗತ್ಯವನ್ನು ಒತ್ತಿ ಹೇಳಿದರು.
“ಸಾಮಾನ್ಯವಾಗಿ ಆರೋಗ್ಯಕ್ಕಾಗಿ ಮತ್ತು ನಿರ್ದಿಷ್ಟವಾಗಿ ಸಾಂಪ್ರದಾಯಿಕ ಔಷಧಕ್ಕಾಗಿ ನಾವೀನ್ಯತೆ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಸರ್ಕಾರದ ಬದ್ಧತೆಯ ಜೊತೆಗೆ ದೀರ್ಘಾವಧಿಯ ಕಾರ್ಯತಂತ್ರದ ಹೂಡಿಕೆ ಅಗತ್ಯವಿದೆ” ಎಂದು ಹೇಳಿದರು.
ನವೋದ್ಯಮಿಗಳು, ಉದ್ಯಮ ಮತ್ತು ಸರ್ಕಾರವ ಸಾಂಪ್ರದಾಯಿಕ ಔಷಧವನ್ನು ಸುಸ್ಥಿರ, ಪರಿಸರ ಸೂಕ್ಷ್ಮ ಮತ್ತು ಸಮಾನ ರೀತಿಯಲ್ಲಿಅಭಿವೃದ್ಧಿಪಡಿಸಲು ಮುಂದೆ ಬರಬೇಕು ಎಂದು ಅವರು ಒತ್ತಿ ಹೇಳಿದರು.
ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯ ಆರು ಭಾರತೀಯ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡಿರುವ ಆಯುಷ್ ವಲಯವು ‘2014 ರಿಂದ ವರ್ಷಕ್ಕೆ 17 ಪ್ರತಿಶತದಷ್ಟು ಗಮನಾರ್ಹವಾಗಿ ಬೆಳೆಯುತ್ತಿದೆ. ಈ ವರ್ಷದ ಅಂತ್ಯದ ವೇಳೆಗೆ ಆಯುಷ್ ಉದ್ಯಮವು USD 23 ಬಿಲಿಯನ್ಗೆ ತಲುಪುವ ನಿರೀಕ್ಷೆಯಿದೆ ಎಂದು WHO ಮಹಾನಿರ್ದೇಶಕರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.