ನವದೆಹಲಿ: ನಾಗರಿಕ ಸೇವಾ ದಿನವಾದ ಏಪ್ರಿಲ್ 21 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠ ಸಾಧನೆಗಾಗಿ ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸಾಮಾನ್ಯ ಪ್ರಜೆಗಳ ಕಲ್ಯಾಣಕ್ಕಾಗಿ ಜಿಲ್ಲೆಗಳು/ಅನುಷ್ಠಾನ ಘಟಕಗಳು ಮತ್ತು ಕೇಂದ್ರ/ರಾಜ್ಯ ಸರ್ಕಾರಿ ಸಂಸ್ಥೆಗಳು ಮಾಡಿದ ಅಸಾಧಾರಣ ಮತ್ತು ನವೀನ ಕಾರ್ಯಗಳನ್ನು ಗುರುತಿಸುವ ದೃಷ್ಟಿಯಿಂದ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆ ಕುರಿತ ಪ್ರಧಾನಮಂತ್ರಿ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ಗುರುತಿಸಲಾದ ಆದ್ಯತೆಯ ಕಾರ್ಯಕ್ರಮಗಳು ಮತ್ತು ನವೀನ ವಿಧಾನಗಳ ಮೂಲಕ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೆಲಸ ಮಾಡಿದವರಿಗೆ ಪ್ರಶಸ್ತಿ ನೀಡಲಾಗುತ್ತದೆ.
ಆದ್ಯತೆಯ ಕಾರ್ಯಕ್ರಮಗಳಲ್ಲಿ ಮಾಡಿದ ಅಸಾಧಾರಣ ಕಾರ್ಯಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ವುಗಳೆಂದರೆ 1.“ಜನ ಭಾಗಿದರಿ” ಗೆ ಉತ್ತೇಜನ ಅಥವಾ ಪೋಷಣ್ ಅಭಿಯಾನದಲ್ಲಿ ಜನರ ಒಳಗೊಳ್ಳುವಿಕೆ, 2. ಖೇಲೋ ಇಂಡಿಯಾ ಯೋಜನೆ ಮೂಲಕ ಕ್ರೀಡೆ ಮತ್ತು ಯೋಗಕ್ಷೇಮದಲ್ಲಿ ಉತ್ಕೃಷ್ಟತೆಯನ್ನು ಉತ್ತೇಜಿಸುವುದು, 3. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಲ್ಲಿ ಡಿಜಿಟಲ್ ಪಾವತಿಗಳು ಮತ್ತು ಉತ್ತಮ ಆಡಳಿತ, 4. ಒಂದು ಜಿಲ್ಲೆ- ಒಂದು ಉತ್ಪನ್ನ ಯೋಜನೆಯ ಮೂಲಕ ಸಮಗ್ರ ಅಭಿವೃದ್ಧಿ, 5. ಮಾನವರ ಮಧ್ಯಪ್ರವೇಶ ವಿಲ್ಲದೆಯೇ ಆರಂಭದಿಂದ ಅಂತ್ಯದಿಂದ ತಡೆರಹಿತ ಸೇವೆಗಳ ವಿತರಣೆ.
ಗುರುತಿಸಲ್ಪಟ್ಟ 5 ಆದ್ಯತಾ ಕಾರ್ಯಕ್ರಮಗಳಿಗೆ ಮತ್ತು ಸಾರ್ವಜನಿಕ ಆಡಳಿತ/ಸೇವೆಗಳ ವಿತರಣೆ ಇತ್ಯಾದಿ ಕ್ಷೇತ್ರದಲ್ಲಿನ ಹೊಸ ಆವಿಷ್ಕಾರಗಳಿಗೆ ಒಟ್ಟು 16 ಪ್ರಶಸ್ತಿಗಳನ್ನು ಈ ವರ್ಷ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.