ನವದೆಹಲಿ: ಇನ್ನು ಎರಡು ದಿನಗಳಲ್ಲಿ ಕೇಂದ್ರ ಏಕ ಶ್ರೇಣಿ ಏಕ ಪಿಂಚಣಿ ಯೋಜನೆ ಜಾರಿಯ ಬಗ್ಗೆ ಘೋಷಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಈ ಬಗ್ಗೆ ಸರ್ಕಾರ ಕರಡು ಪ್ರತಿಯನ್ನು ರಚಿಸಿದೆ. ಇದರಂತೆ ಈ ಯೋಜನೆಗೆ ತಗಲುವ ಒಟ್ಟು ವೆಚ್ಚ 8 ಸಾವಿರದಿಂದ 10 ಸಾವಿರ ಕೋಟಿ, 2014ರಿಂದ ಅನ್ವಯವಾಗುವಂತೆ ಇದನ್ನು ಜಾರಿಗೊಳಿಸಲಾಗುತ್ತಿದೆ. ಅಲ್ಲದೇ ಐದು ವರ್ಷಗಳಿಗೊಮ್ಮೆ ಪಿಂಚಣಿಯನ್ನು ಪರಿಷ್ಕೃತಗೊಳಿಸಲಾಗುತ್ತದೆ.
ಆದರೆ ಸರ್ಕಾರದ ಈ ಪ್ರಸ್ತಾಪವನ್ನು ಮಾಜಿ ಯೋಧರು ಈಗಾಗಲೇ ತಿರಸ್ಕರಿಸಿದ್ದಾರೆ. ತಮ್ಮ ಎಲ್ಲಾ ಬೇಡಿಕೆಗಳು ಪೂರೈಸುವಂತೆ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಸರ್ಕಾರ ಮಾತ್ರ ತನ್ನ ನಿಲುವನ್ನು ಬದಲಿಸಲು ಮುಂದಾಗಿಲ್ಲ.
ಕಳೆದ 82ದಿನಗಳಿಂದ ಮಾಜಿ ಸೈನಿಕರು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಪ್ರಸ್ತಾಪವನ್ನು ನಾವು ನೋಡಿಲ್ಲ, ಒಂದು ವೇಳೆ ಇದನ್ನು ಜಾರಿಗೊಳಿಸಲು ಹೊರಟರೆ ಅದು ಏಕಪಕ್ಷೀಯ ನಿರ್ಧಾರವಾಗಲಿದೆ ಎಂದು ಪ್ರತಿಭಟನಾನಿರತರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.