ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಬಾರಿ ಒಟ್ಟು 6,84,255 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಬಾಲಕರು -3,46,936, ಬಾಲಕಿಯರು 3,37,319 ಇದ್ದಾರೆ. ಸಕ್ರಿಯ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ವಿದ್ಯಾರ್ಥಿಗಳು 21,928 ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ.
ರಾಜ್ಯಾದ್ಯಂತ ಒಟ್ಟು 1076 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಅಕ್ರಮಗಳನ್ನು ತಡೆಯಲು ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕಣ್ಗಾವಲು ಇಡಲಾಗುತ್ತಿದೆ, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಫೋಟೋಕಾಪಿ ಶಾಪ್ ಬಂದ್ ಇರಲಿದೆ.
ಮೇ 18 ರ ವರೆಗೂ ಪರೀಕ್ಷೆ ನಡೆಯಲಿದೆ.
ಪಿಯುಸಿ ಪರೀಕ್ಷೆಗೂ ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಧರ್ಮ ಸೂಚಕ ಬಟ್ಟೆಗಳನ್ನು ಧರಿಸಲು ಅವಕಾಶವಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.