ನವದೆಹಲಿ: ದೇಶದ ಗಡಿಯಲ್ಲಿ ಹಲವಾರು ಸವಾಲುಗಳು ಎದುರಾದರೂ ಸೈನಿಕರು ದೃಢವಾಗಿ ನಿಂತಿದ್ದಾರೆ ಮತ್ತು ಸಮಸ್ಯೆಗಳ ಶಾಂತಿಯುತ ಪರಿಹಾರಕ್ಕಾಗಿ ಮಾತುಕತೆಗಳು ಮುಂದುವರಿಯುತ್ತವೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಸೇನಾ ಕಮಾಂಡರ್ಗಳ ಸಮ್ಮೇಳನದಲ್ಲಿ ಸಿಂಗ್ ಮಾತನಾಡುತ್ತಿದ್ದರು.
ಹೈಬ್ರಿಡ್ ಯುದ್ಧ ಸೇರಿದಂತೆ ಅಸಾಂಪ್ರದಾಯಿಕ ಮತ್ತು ಬಹುವಲಯ ಯುದ್ಧವು ಭವಿಷ್ಯದ ಯುದ್ಧಗಳ ಭಾಗವಾಗಲಿದೆ. ಸೈಬರ್, ಮಾಹಿತಿ, ಸಂವಹನ, ವ್ಯಾಪಾರ ಮತ್ತು ಹಣಕಾಸು ಎಲ್ಲವೂ ಭವಿಷ್ಯದ ಸಂಘರ್ಷಗಳ ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಅವರು ಹೇಳಿದರು.
ಪಾಶ್ಚಿಮಾತ್ಯ ಗಡಿಯಲ್ಲಿನ ಪರಿಸ್ಥಿತಿಯನ್ನು ಉಲ್ಲೇಖಿಸಿ, ಗಡಿ ಭಯೋತ್ಪಾದನೆಗೆ ಸೇನೆಯ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು. ಎದುರಾಳಿಯಿಂದ ಪ್ರಾಕ್ಸಿ ಯುದ್ಧ ಮುಂದುವರೆದಿದೆ ಎಂದರು.
ನಮ್ಮ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನಡೆಯುತ್ತಿರುವ ತಾಂತ್ರಿಕ ಪ್ರಗತಿಯ ಬಗ್ಗೆ ಸಚಿವರು ಒತ್ತಿ ಹೇಳಿದರು ಮತ್ತು ತಂತ್ರಜ್ಞಾನವನ್ನು ಸಶಸ್ತ್ರ ಪಡೆಗಳು ಸೂಕ್ತವಾಗಿ ಅಳವಡಿಸಿಕೊಂಡಿದ್ದಕ್ಕಾಗಿ ಶ್ಲಾಘಿಸಿದರು. ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಸೈನಿಕರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಗಮನಹರಿಸಿದೆ ಎಂದು ಅವರು ಒತ್ತಿ ಹೇಳಿದರು. ಇಂಟಿಗ್ರೇಟೆಡ್ ಥಿಯೇಟರ್ ಕಮಾಂಡ್ನ ಔಪಚಾರಿಕೀಕರಣವು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದರು ಮತ್ತು ಅದೇ ನಿಟ್ಟಿನಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಆಪರೇಷನ್ ಗಂಗಾ ಮೂಲಕ ಇತ್ತೀಚೆಗೆ ಉಕ್ರೇನ್ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಿದ್ದಕ್ಕಾಗಿ ಸಿಂಗ್ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದರು. ಕಳೆದ ಎರಡೂವರೆ ವರ್ಷಗಳಲ್ಲಿ ಸೇನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವ ಸೇನಾ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ ಅವರನ್ನು ರಕ್ಷಣಾ ಸಚಿವರು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.