ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೌಶಲ್ಯ ಕ್ರಾಂತಿಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.
ಅವರು ಇಂದು ಕಲಬುರಗಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕೌಶಲ್ಯ ರಥ ಲೋಕಾರ್ಪಣೆ ನೆರವೇರಿಸಿ ಮಾತನಾಡುತ್ತಿದ್ದರು.
ಕೌಶಲ್ಯ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿಶ್ವದಲ್ಲಿ ಅತಿ ಹೆಚ್ಚು ಯುವಕರಿರುವ ದೇಶ ಭಾರತ. ಸುಮಾರು 46% ರಷ್ಟು ಜನಯುವಕರಿಗೆ ಭವಿಷ್ಯವನ್ನು ನಿರ್ಮಿಸುವ ಸಲುವಾಗಿ ವಿದ್ಯೆ ಮತ್ತು ಕೌಶಲ್ಯ ಎರಡೂ ಇದ್ದರೆ ಉದ್ಯೋಗ ದೊರೆಯುತ್ತದೆ. ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮ ಇದಾಗಿದೆ. ಕರ್ನಾಟಕ ಸರ್ಕಾರ ಸಹ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಕೌಶಲ್ಯಾಭಿವೃದ್ಧಿ ಕೈಗೊಂಡಿದೆ ಎಂದು ತಿಳಿಸಿದರು.
ರಾಜ್ಯದ ಗ್ರಾಮೀಣ ಭಾಗದ ಯುವ ಜನತೆಗೆ ಇರುವಲ್ಲಿಯೇ ತೆರಳಿ ಸೂಕ್ತ ಕೌಶಲ್ಯ ತರಬೇತಿ ಮೂಲಕ ಜೀವನೋಪಾಯ ಕಲ್ಪಿಸುವ "ಕೌಶಲ್ಯ ರಥ – Skill on Wheels" ಅನ್ನು ಮುಖ್ಯಮಂತ್ರಿ @BSBommai ಅವರು ಕಲಬುರಗಿಯಲ್ಲಿ ಇಂದು ಉದ್ಘಾಟಿಸಿದರು.
1/2 pic.twitter.com/4wp4tNqTGl— CM of Karnataka (@CMofKarnataka) April 22, 2022
ಪ್ರತಿ ವರ್ಷ ಸಾವಿರಾರು ಯುವಕರಿಗೆ ಬೇರೆ ಬೇರೆ ಕಸುಬಿನಲ್ಲಿ ತರಬೇತಿ ಕೊಟ್ಟು ಅವರಿಗೆ ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲುವ ಶಕ್ತಿ ಯನ್ನು ತುಂಬುವ ಕೆಲಸ ಇಲಾಖೆ ಮಾಡುತ್ತಿದೆ. ಇದನ್ನು ಇನ್ನಷ್ಟು ವ್ಯಾಪಕವಾಗಿ ಯುವಕರು ಇರುವಲ್ಲಿಯೇ ತರಬೇತಿ ಯನ್ನು ನೀಡಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಕೌಶಲ್ಯ ರಥವನ್ನು ಉದ್ಘಾಟಿಸಲಾಗಿದೆ. ಎಲೆಕ್ಟ್ರಿಷಿಯನ್ ಹಾಗೂ ಬ್ಯುಟೀಷಿಯನ್ ಕೋರ್ಸುಗಳನ್ನು ಆಕಾಂಕ್ಷಿಗಳು ಕೈಗೊಳ್ಳಬಹುದು. ಗ್ರಾಮೀಣ ಪ್ರದೇಶದ ಪ್ರತಿ ಪಂಚಾಯತಿಯಲ್ಲಿ ತರಬೇತಿ ಕೊಟ್ಟು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸುವ ಯೋಜನೆ ಇದಾಗಿದೆ ಎಂದರು.
ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಹಾಗೂ ಕೌಶಲ್ಯ ಪಡೆಯುವವರ ಸಂಖ್ಯೆ ಹೆಚ್ಚಾಗಿ ಅವರು ಸ್ವಯಂ ಉದ್ಯೋಗ ಕೈಗೊಳ್ಳುವಂತಾಗಬೇಕು. ಅದಕ್ಕೆ ಇಲ್ಲಿ ವಿಪುಲ ಅವಕಾಶಗಳಿಗೆ. ಹಳ್ಳಿಗಳಲ್ಲಿ ಸರಿಯಾದ ಮೋಟಾರ್ ವೈಂಡರ್ ಸಿಗುವುದಿಲ್ಲ. ಅದಕ್ಕೆ ತಾಲ್ಲೂಕು ಕೇಂದ್ರಕ್ಕೆ ಹೋಗಬೇಕು. ಅದನ್ನು ತಪ್ಪಿಸಲು ಪ್ರತಿ ಗ್ರಾಮದಲ್ಲಿ ಎಲೆಕ್ಟ್ರೀಷಿಯನ್, ಪ್ಲಂಬರ್, ರಿಪೇರಿ ಮುಂತಾದ ಕೌಶಲ್ಯ ವಿರುವ ಯುವಕರ ಪಡೆಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಕೆಲಸವನ್ನು ಪ್ರಾರಂಭಿಸಲಾಗಿದೆ. ಈ ವರ್ಷ 2.50 ಲಕ್ಷ ಕ್ಕೂ ಹೆಚ್ಚು ಜನರಿಗೆ ತರಬೇತಿ ನೀಡುವ ಗುರಿಯಿದೆ. ಜೀವನೋಪಾಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅದರಲ್ಲಿ ಇದೂ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ ಎಂದರು.
ಪ್ರತಿ ಗ್ರಾಮದಲ್ಲಿ ಕೌಶಲ್ಯಭರಿತ ಪಡೆ
ಕೌಶಲ್ಯಾಭಿವೃದ್ಧಿಗೆ ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗುವುದು. ಮುಂಬರುವ ದಿನಗಳಲ್ಲಿ ಪ್ರತಿ ಗ್ರಾಮದಲ್ಲಿ ಕೌಶಲ್ಯ ಭರಿತ ಪಡೆ ನಿರ್ಮಿಸಿ ಸ್ವಯಂ ಉದ್ಯೋಗ ಕೈಗೊಳ್ಳುವಂತೆ ಮಾಡುವುದು ಹಾಗೂ ತರಬೇತಿಯ ನಂತರ ಪ್ರಮುಖ ಸಂಸ್ಥೆಗಳಲ್ಲಿ ಈ ಯುವಕರನ್ನು ತೊಡಗಿಸಬೇಕು ಎಂದೂ ಸಹ ಸೂಚನೆ ನೀಡಲಾಗಿದೆ ಎಂದರು.
ಟ್ರಾನ್ಸ್ ಫಾರ್ಮರ್ ದುರಸ್ತಿ
ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಟ್ರಾನ್ಸ್ ಫಾರ್ಮರ್ ದುರಸ್ತಿಗೆ ವಿಶೇಷ ತರಬೇತಿ ನೀಡಲು ಸೂಚನೆ ನೀಡಲಾಗಿದೆ. ಇದರಿಂದ ರೈತಾಪಿ ವರ್ಗಕ್ಕೆ ಸಹಾಯವಾಗಲಿದೆ. ಆ ನಿಟ್ಟಿನಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಇಲಾಖೆ ಕೆಲಸ ಮಾಡಬೇಕು. ಸಚಿವರ ದಕ್ಷ ನೇತೃತ್ವದಲ್ಲಿ ಹೊಸ ಆವಿಷ್ಕಾರ ಹಾಗೂ ವಿಧಾನವನ್ನು ಅವರು ರಾಜ್ಯಕ್ಕೆ ನೀಡುತ್ತಿದ್ದಾರೆ. ವಿನೂತನ ಕೌಶಲ್ಯ ಅಭಿವೃದ್ಧಿ, ಬಡತನ ನಿರ್ಮೂಲನೆ ಐಟಿ ಇಲಾಖೆಗೆ ಸಂಯೋಜಿಸುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದ್ದಾರೆ ಎಂದರು.
ಕೈಗಾರಿಕಾ ಸಚಿವರು ಸಹ ಈ ವಿಷಯದಲ್ಲಿ ಆಸಕ್ತಿ ಹೊಂದಿದ್ದು, ಅವರ ಸಂಸ್ಥೆಗಳಲ್ಲಿಯೂ ಸಾಕಷ್ಟು ಕೌಶಲ್ಯಾಭಿವೃದ್ಧಿಯನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.