ಜೈಪುರ: ರಾಜಸ್ಥಾನದ ಅಲ್ವಾರ್ನಲ್ಲಿನ ಜಿಲ್ಲಾಡಳಿತ ಇಂದು ಅಲ್ವಾರ್ನಲ್ಲಿನ 300 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು ನೆಲಸಮಗೊಳಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ದೆಹಲಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ನಡೆದ ಘಟನೆಯ ಎರಡು ದಿನಗಳ ನಂತರ ಅಲ್ವಾರ್ ಜಿಲ್ಲೆಯ ರಾಜ್ಗಢ್ ಪಟ್ಟಣದಲ್ಲಿರುವ ಭಗವಾನ್ ಶಿವ ದೇವಾಲಯವನ್ನು ಬುಲ್ಡೋಜರ್ ಬಳಸಿ ಕೆಡವಲಾಯಿತು.
ದೇವಸ್ಥಾನ ಧ್ವಂಸಗೊಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ವಿವಾದಕ್ಕೆ ಸಿಲುಕಿಸಿದೆ. ಆದರೆ, ರಾಜ್ಗಢ ಪುರಸಭೆಯಲ್ಲಿ ಬಿಜೆಪಿ ಆಡಳಿತವಿದೆ ಎಂದು ಆಡಳಿತ ಪಕ್ಷ ಕೈತೊಳೆದುಕೊಂಡಿದೆ, ಬಿಜೆಪಿ ಕಾಂಗ್ರೇಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಇದೇ ವೇಳೆ ಸ್ಥಳೀಯ ಆಡಳಿತವು ಮಾಸ್ಟರ್ ಪ್ಲಾನ್ ಪ್ರಕಾರ ಅತಿಕ್ರಮಣ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ .
ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಅವರು 300 ವರ್ಷಗಳಷ್ಟು ಹಳೆಯದಾದ ದೇವಾಲಯವು ಅತಿಕ್ರಮಣವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ತನ್ನ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದು, ಮೂರು ದಿನಗಳಲ್ಲಿ ತಂಡ ವರದಿ ನೀಡಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.