ಲಕ್ನೋ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ತರಲು ಪ್ರಯತ್ನಿಸುತ್ತಿದ್ದಾರೆ, ಇದೀಗ ಉತ್ತರ ಪ್ರದೇಶ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ.
ಏಕರೂಪ ನಾಗರಿಕ ಸಂಹಿತೆಯನ್ನು ರಾಜ್ಯಕ್ಕೆ ತರಲು ಯೋಗಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಯುಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಖಚಿತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮೌರ್ಯ, “ಎಲ್ಲರೂ ಏಕರೂಪ ನಾಗರಿಕ ಸಂಹಿತೆಯನ್ನು ತರುವಂತೆ ಒತ್ತಾಯಿಸಬೇಕು ಮತ್ತು ಅದನ್ನು ಸ್ವಾಗತಿಸಬೇಕು, ಉತ್ತರ ಪ್ರದೇಶ ಸರ್ಕಾರವೂ ಈ ದಿಕ್ಕಿನಲ್ಲಿ ಯೋಚಿಸುತ್ತಿದೆ” ಎಂದು ಹೇಳಿದರು.
“ನಾವು ಏಕರೂಪ ನಾಗರಿಕ ಸಂಹಿತೆ ಪರವಾಗಿರುತ್ತೇವೆ. ಇದು ಯುಪಿ ಮತ್ತು ದೇಶದ ಜನರಿಗೆ ಅವಶ್ಯಕವಾಗಿದೆ. ಇದು ಬಿಜೆಪಿಯ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ” ಎಂದು ಅವರು ಹೇಳಿದರು.
ಈ ನಡುವೆ ಉತ್ತರಾಖಂಡ್ ಸಿಎಂ ಧಾಮಿ ಕಳೆದ ವಾರ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಪರಿಚಯಿಸುವತ್ತ ಮೊದಲ ಹೆಜ್ಜೆ ಇಡಲಾಗಿದೆ, ರಾಜ್ಯ ಸಚಿವ ಸಂಪುಟವು ಕರಡು ಸಮಿತಿಯನ್ನು ರಚಿಸಲು ಹಸಿರು ನಿಶಾನೆ ತೋರಿಸಿದೆ ಎಂದು ಹೇಳಿದ್ದಾರೆ.
“ನಾವು ನಮ್ಮ ಗಡಿಯನ್ನು ಎರಡು ದೇಶಗಳೊಂದಿಗೆ ಹಂಚಿಕೊಳ್ಳುವುದರಿಂದ ನಮಗೆ ಏಕರೂಪ ನಾಗರಿಕ ಸಂಹಿತೆಯ ಅಗತ್ಯವಿದೆ. ಉತ್ತರಾಖಂಡದ ಪ್ರತಿಯೊಂದು ಕುಟುಂಬವು ಸಶಸ್ತ್ರ ಪಡೆಗಳಲ್ಲಿ ತನ್ನ ಸದಸ್ಯರನ್ನು ಹೊಂದಿದೆ. ಉತ್ತರಾಖಂಡವು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರವಾಗಿದೆ” ಎಂದು ಅವರು ಹೇಳಿದರು.
ಈ ಸಂಹಿತೆ ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗುವಂತೆ ಸಮಾನತೆಯನ್ನು ತರುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು. ಭಾರತದ ಸಂವಿಧಾನದ 44 ನೇ ವಿಧಿಯು ಯುಸಿಸಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.