ನವದೆಹಲಿ: ಪೋರ್ಚುಗೀಸರು ಧ್ವಂಸಗೊಳಿಸಿರುವ ರಾಜ್ಯದಲ್ಲಿನ ದೇವಾಲಯಗಳನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ರಾಜಸ್ಥಾನದ ಅಲ್ವಾರ್ನಲ್ಲಿ 300 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು ಧ್ವಂಸಗೊಳಿಸಿದ ಕುರಿತು ಪ್ರತಿಕ್ರಿಯಿಸಿದ ಸಾವಂತ್, ಕಾಂಗ್ರೆಸ್ ಸರ್ಕಾರದ ಕ್ರಮಗಳನ್ನು ಕಟುವಾಗಿ ಟೀಕಿಸಿದರು. ಅಲ್ಲದೇ, ಪೋರ್ಚುಗೀಸರಿಂದ ಧ್ವಂಸಗೊಂಡ ದೇವಾಲಯಗಳನ್ನು ಪುನರ್ ನಿರ್ಮಿಸಲು ಮತ್ತು ಪುನಃಸ್ಥಾಪಿಸಲು ಗೋವಾ ಸರ್ಕಾರ ಪ್ರಯತ್ನಿಸುತ್ತದೆ ಎಂದು ಸಾವಂತ್ ಹೇಳಿದರು.
“ನಾವು ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುತ್ತೇವೆ. ಇದಕ್ಕಾಗಿ 20 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ” ಎಂದು ತಿಳಿಸಿದ್ದಾರೆ.
“ನಮ್ಮ ಪೂಜಾ ಸ್ಥಳಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪ್ರತೀಕಗಳಾಗಿವೆ. ಗೋವಾದ ಅನೇಕ ಸ್ಥಳಗಳಲ್ಲಿ, ಹಲವಾರು ದೇವಾಲಯಗಳು ಶಿಥಿಲಗೊಂಡ ಮತ್ತು ನಿರ್ಲಕ್ಷಿಸಲ್ಪಟ್ಟ ಸ್ಥಿತಿಯಲ್ಲಿವೆ. ಪೋರ್ಚುಗೀಸರ ಆಳ್ವಿಕೆಯಲ್ಲಿ, ಈ ಸಾಂಸ್ಕೃತಿಕ ಕೇಂದ್ರಗಳನ್ನು ನಾಶಮಾಡಲು ವ್ಯವಸ್ಥಿತ ಪ್ರಯತ್ನಗಳು ನಡೆದವು. ಪ್ರವಾಸೋದ್ಯಮ ಅಭಿವೃದ್ಧಿಯನ್ನು ಪರಿಗಣಿಸಿ, ಈ ದೇವಾಲಯಗಳು ಮತ್ತು ಸೈಟ್ಗಳ ಪುನರ್ನಿರ್ಮಾಣ ಮತ್ತು ಜೀರ್ಣೋದ್ಧಾರಕ್ಕಾಗಿ ನಾವು 20 ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ” ಎಂದು ಸಾವಂತ್ ತಮ್ಮ ಕಳೆದ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.