ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಮಾತುಕತೆ ನಡೆಸಿದರು. ಉಭಯ ನಾಯಕರು ಭಾರತ-ಇಯು ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ವ್ಯಾಪಾರ, ಹವಾಮಾನ, ಡಿಜಿಟಲ್ ತಂತ್ರಜ್ಞಾನ ಮತ್ತು ಜನರ-ಜನರ ನಡುವಿನ ಸಂಬಂಧಗಳ ಕ್ಷೇತ್ರಗಳಲ್ಲಿ ಸಹಕಾರವನ್ನು ಗಾಢಗೊಳಿಸಲು ಪರಸ್ಪರ ಒಪ್ಪಿಕೊಂಡರು.
ಇದಕ್ಕೂ ಮುನ್ನ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ಲೇಯನ್ ಅವರನ್ನು ಭೇಟಿ ಮಾಡಿದರು. ಇಬ್ಬರೂ ಭಾರತ-ಇಯು ಪಾಲುದಾರಿಕೆಯನ್ನು ಮುಂದಕ್ಕೆ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಿದರು. ಉಕ್ರೇನ್ ಸಂಘರ್ಷದ ಆರ್ಥಿಕ ಮತ್ತು ರಾಜಕೀಯ ಪರಿಣಾಮಗಳ ಕುರಿತು ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಈ ದಶಕದಲ್ಲಿ ಪಾಲುದಾರಿಕೆಯನ್ನು ಬಲಪಡಿಸುವುದು ಪ್ರಮುಖ ಆದ್ಯತೆಯಾಗಿದೆ ಎಂದು ಲೇಯೆನ್ ಹೇಳಿದ್ದಾರೆ. ಭಾರತ-ಇಯು ವ್ಯಾಪಾರ, ತಂತ್ರಜ್ಞಾನ ಮತ್ತು ಭದ್ರತೆಯಲ್ಲಿ ಸಹಕಾರವನ್ನು ಹೆಚ್ಚಿಸಲಿದೆ ಎಂದ ಅವರು, ಭಾರತ ಮತ್ತು ಇಯು ʼಇಯು-ಇಂಡಿಯಾ ಟ್ರೇಡ್ ಅಂಡ್ ಟೆಕ್ನಾಲಜಿ ಕೌನ್ಸಿಲ್ʼ ಅನ್ನು ಪ್ರಾರಂಭಿಸಲಿದೆ ಲೇಯೆನ್ ಮಾಹಿತಿ ನೀಡಿದರು.
ಟ್ರೇಡ್ ಅಂಡ್ ಟೆಕ್ನಾಲಜಿ ಕೌನ್ಸಿಲ್ ರಾಜಕೀಯ ನಿರ್ಧಾರಗಳನ್ನು ಕಾರ್ಯಗತಗೊಳಿಸಲು, ತಾಂತ್ರಿಕ ಕಾರ್ಯಗಳನ್ನು ಸಂಘಟಿಸಲು ಮತ್ತು ಯುರೋಪಿಯನ್ ಮತ್ತು ಭಾರತೀಯ ಆರ್ಥಿಕತೆಗಳ ಸುಸ್ಥಿರ ಪ್ರಗತಿಗೆ ಪ್ರಮುಖವಾದ ಕ್ಷೇತ್ರಗಳಲ್ಲಿ ಅನುಷ್ಠಾನ ಮತ್ತು ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ರಾಜಕೀಯ ಮಟ್ಟಕ್ಕೆ ವರದಿ ಮಾಡಲು ಅಗತ್ಯ ಸಹಕಾರ ಒದಗಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.