ನವದೆಹಲಿ: ಶರತ್ಕಾಲ (ಖಾರಿಫ್) ಋತು – 2022ಗಾಗಿ ರಂಜಕ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರಗಳ ಆಧಾರದಲ್ಲಿ ರಸಗೊಬ್ಬರ ನೀಡಲು ಇಲಾಖೆ ಮಾಡಿರುವ ಪ್ರಸ್ತಾವನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದಿಸಿದೆ.
ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದಿಸಿದ ಪೋಷಕಾಂಶ ಆಧಾರಿತ ಸಬ್ಸಿಡಿಯು ರೂ. 60,939.23 ಕೋಟಿಗಳು, ಇದರಲ್ಲಿ ಸ್ಥಳೀಯ ಉತ್ಪಾದನೆಗೆ ಬೆಂಬಲ ಜೊತೆಗೆ ಸರಕು ಸಾಗಣೆ ಸಬ್ಸಿಡಿ ಮತ್ತು ಹೆಚ್ಚುವರಿ ಬೆಂಬಲದ ಮೂಲಕ ದೇಶೀಯ ರಸಗೊಬ್ಬರ ಉತ್ಪಾದನೆ ಹಾಗೂ ಡಿಎಪಿಯ ಆಮದುಗಳಿಗೆ ಬೆಂಬಲ ಕೂಡ ಸೇರಿದೆ.
ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಮತ್ತು ಅದರ ಕಚ್ಚಾ ವಸ್ತುಗಳ ಅಂತರರಾಷ್ಟ್ರೀಯ ಬೆಲೆಗಳಲ್ಲಿನ ಹೆಚ್ಚಳವನ್ನು ಪ್ರಾಥಮಿಕವಾಗಿ ಕೇಂದ್ರ ಸರ್ಕಾರವು ಬರಿಸಿಕೊಳ್ಳುತ್ತದೆ. ಪ್ರತಿ ಚೀಲಕ್ಕೆ ಕಳೆದ ವರ್ಷ ನೀಡಿರುವ ರೂ.1650 ರ ಡಿಎಪಿ ಸಬ್ಸಿಡಿ ಬದಲಿಗೆ ಈ ವರ್ಷ ರೂ. 2501 ಗಳ ಸಹಾಯಧನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ಕಳೆದ ವರ್ಷದ ಸಬ್ಸಿಡಿ ದರಗಳಿಗಿಂತ 50% ಅಧಿಕವಾಗಿದೆ. ಡಿಎಪಿ ಮತ್ತು ಅದರ ಕಚ್ಚಾ ವಸ್ತುಗಳ ಬೆಲೆಗಳಲ್ಲಿ ಹೆಚ್ಚಳವು ಅಂದಾಜು 80% ವ್ಯಾಪ್ತಿಯಲ್ಲಿದೆ. ಈ ಮೂಲಕ , ಕೈಗೆಟುಕುವ ಮತ್ತು ಸಮಂಜಸವಾದ ದರಗಳಲ್ಲಿ ಅಧಿಸೂಚಿತ ಪಿ& ಕೆ ರಸಗೊಬ್ಬರಗಳನ್ನು ಸಬ್ಸಿಡಿ ಜೊತೆಗೆ ಪಡೆಯಲು ರೈತರಿಗೆ ಸಹಾಯವಾಗುತ್ತದೆ ಮತ್ತು ಕೃಷಿ ವಲಯವನ್ನು ಬೆಂಬಲಿಸಿದಂತಾಗುತ್ತದೆ.
ಪಿ&ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಎ.ಬಿ.ಎಸ್. ದರಗಳ ಆಧಾರದ ಮೇಲೆ ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಈ ರಸಗೊಬ್ಬರಗಳ ಸುಗಮ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಒದಗಿಸಲಾಗುತ್ತದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.