ಮಂಗಳೂರು: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಪ್ರೇರಿತರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಯೊಂದರ ಮುಖ್ಯಸ್ಥರು, ತಮ್ಮ ತಾಯ್ನಾಡನ್ನು ತೊರೆದು ದೇಶಾದ್ಯಂತ ನೆಲೆಸಿರುವ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯ ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ್ ಶನಿವಾರ ಈ ಘೋಷಣೆ ಮಾಡಿದ್ದಾರೆ.
ಕಾಶ್ಮೀರಿ ಹಿಂದೂಗಳು, ವಿಶೇಷವಾಗಿ ಪಂಡಿತರು ವಲಸೆಯ ಸಮಯದಲ್ಲಿ ಅನುಭವಿಸಿದ ದೌರ್ಜನ್ಯಗಳನ್ನು ಪ್ರತಿಬಿಂಬಿಸಿರುವ ವಿವೇಕ್ ಅಗ್ನೋಹೋತ್ರಿ ಅವರ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಪ್ರೇರಿತರಾದ ನಟ್ಟೋಜ್ ಜಮ್ಮುವಿಗೆ ಭೇಟಿ ನೀಡಿದ್ದಾರೆ. ಅವರ ಈ ಭೇಟಿ ಕಾಶ್ಮೀರಿ ಹಿಂದೂಗಳ ಮಕ್ಕಳಿಗಾಗಿ ಏನನ್ನಾದರೂ ಮಾಡಲು ಅವರನ್ನು ಪ್ರೇರೇಪಿಸಿದೆ, ಹೀಗಾಗಿ ಅವರು ಕಾಶ್ಮೀರಿ ಪಂಡಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಘೋಷಿಸಿದ್ದಾರೆ.
ನಮ್ಮ ಶಿಕ್ಷಣ ಸಂಸ್ಥೆಯಲ್ಲಿ, ಕಾಶ್ಮೀರಿ ಪಂಡಿತರು ಆರನೇ ತರಗತಿಯಿಂದ ಪದವಿಯವರೆಗೆ ಉಚಿತ ಶಿಕ್ಷಣವನ್ನು ಪಡೆಯಬಹುದು. ಅಂತಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವನ್ನೂ ಉಚಿತವಾಗಿ ನೀಡಲಾಗುವುದು ಎಂದಿದ್ದಾರೆ.
ಈಗಾಗಲೇ ಅವರ ಶಿಕ್ಷಣ ಸಂಸ್ಥೆಗೆ ನಾಲ್ಕು ಕಾಶ್ಮೀರಿ ಪಂಡಿತರು ಪ್ರವೇಶ ಪಡೆದಿದ್ದಾರೆ.
ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆಯಲು ಪ್ರತಿ ವಿದ್ಯಾರ್ಥಿಗೆ ಒಂದು ವರ್ಷಕ್ಕೆ 80,000 ರೂ.ವರೆಗೆ ವೆಚ್ಚವಾಗಲಿದೆ. ಇತರೆ ಸೌಲಭ್ಯಗಳಿಗೆ ವಾರ್ಷಿಕ 50,000 ರೂ. ಆದರೆ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲಾ ಸೌಲಭ್ಯಗಳು ಉಚಿತವಾಗಿ ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.