ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಕೆನಡಾದ ಒಂಟಾರಿಯೊದಲ್ಲಿರುವ ಸನಾತನ ಮಂದಿರದ ಸಾಂಸ್ಕೃತಿಕ ಕೇಂದ್ರದಲ್ಲಿ ಸರ್ದಾರ್ ಪಟೇಲ್ ಅವರ ಪ್ರತಿಮೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ದಾರ್ ಪಟೇಲ್ ಅವರ ಪ್ರತಿಮೆಯು ಸಾಂಸ್ಕೃತಿಕ ಮೌಲ್ಯಗಳನ್ನು ಬಲಪಡಿಸುವುದಲ್ಲದೆ ಉಭಯ ದೇಶಗಳ ನಡುವಿನ ಸಂಬಂಧದ ಸಂಕೇತವೂ ಆಗಲಿದೆ ಎಂದು ಹೇಳಿದರು.
ಭಾರತವು ಇತರರಿಗೆ ಹಾನಿ ಮಾಡಿ ತನ್ನ ಉನ್ನತಿಯ ಕನಸು ಕಾಣುವುದಿಲ್ಲ ಎಂದರು.
ಭಾರತೀಯ ನೈತಿಕತೆ ಮತ್ತು ಮೌಲ್ಯಗಳ ಆಳವನ್ನು ವಿವರಿಸಿದ ಪ್ರಧಾನಮಂತ್ರಿಯವರು, ಭಾರತೀಯರು ಜಗತ್ತಿನ ಯಾವುದೇ ಮೂಲೆಯಲ್ಲಿ ವಾಸಿಸಿದರೂ ಅವರ ಭಾರತೀಯತೆ ಮತ್ತು ದೇಶದ ಬಗೆಗಿನ ನಿಷ್ಠೆ ಎಂದಿಗೂ ಕಡಿಮೆಯಾಗುವುದಿಲ್ಲ ಎಂದು ಹೇಳಿದರು.
ಭಾರತೀಯರು ತಾವು ವಾಸಿಸುತ್ತಿರುವ ದೇಶಕ್ಕಾಗಿ ಸಂಪೂರ್ಣ ಸಮರ್ಪಣೆ ಮತ್ತು ಸಮಗ್ರತೆಯಿಂದ ಕೆಲಸ ಮಾಡುತ್ತಾರೆ ಮತ್ತು ಅವರ ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಕರ್ತವ್ಯ ಪ್ರಜ್ಞೆಯನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಾರೆ ಎಂದು ಅವರು ಹೇಳಿದರು. ಭಾರತ ಕೇವಲ ರಾಷ್ಟ್ರವಲ್ಲ, ಕಲ್ಪನೆ ಮತ್ತು ಸಂಸ್ಕೃತಿಯೂ ಆಗಿದೆ ಎಂದರು. ಭಾರತವು ‘ವಸುಧೈವ ಕುಟುಂಬಕಂ’ ಕುರಿತು ಮಾತನಾಡುವ ಉನ್ನತ ಮಟ್ಟದ ಚಿಂತನೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೆನಡಾ ಅಥವಾ ಇನ್ನಾವುದೇ ದೇಶದಲ್ಲಿರುವ ಸನಾತನ ಮಂದಿರ ಆ ದೇಶದ ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತದೆ ಎಂದು ಮೋದಿ ಹೇಳಿದರು. ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯು ಕೆನಡಾದ ಜನರಿಗೆ ಭಾರತವನ್ನು ಹೆಚ್ಚು ಹತ್ತಿರದಿಂದ ಅರ್ಥಮಾಡಿಕೊಳ್ಳಲು ಅವಕಾಶವನ್ನು ನೀಡುತ್ತದೆ ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದರು. ಭಾರತದ ಅಮೃತ ಪ್ರತಿಜ್ಞೆಗಳು ಜಾಗತಿಕವಾಗಿ ಹರಡುತ್ತಿವೆ ಮತ್ತು ಜಗತ್ತನ್ನು ಸಂಪರ್ಕಿಸುತ್ತಿವೆ ಎಂದು ಪ್ರಧಾನಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.