ನವದೆಹಲಿ: ಲಸಿಕೆ ತೆಗೆದುಕೊಳ್ಳುವಂತೆ ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಅಲ್ಲದೇ ವ್ಯಾಕ್ಸಿನೇಷನ್ನ ದುಷ್ಪರಿಣಾಮಗಳ ಕುರಿತು ವರದಿಗಳನ್ನು ಪ್ರಕಟಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.
“ದೇಹದ ಸಮಗ್ರತೆಯನ್ನು ಕಾನೂನಿನ ಅಡಿಯಲ್ಲಿ ರಕ್ಷಿಸಲಾಗಿದೆ ಮತ್ತು ಲಸಿಕೆ ಹಾಕುವಂತೆ ಯಾರನ್ನೂ ಒತ್ತಾಯಿಸಲಾಗುವುದಿಲ್ಲ. ಆದರೆ ಸಮುದಾಯದ ಆರೋಗ್ಯದ ಹಿತದೃಷ್ಟಿಯಿಂದ ವೈಯಕ್ತಿಕ ಹಕ್ಕುಗಳ ಮೇಲೆ ಕೆಲವು ಮಿತಿಗಳನ್ನು ವಿಧಿಸಬಹುದು” ಎಂದಿದೆ.
“ಕೋವಿಡ್-ಸೂಕ್ತ ನಡವಳಿಕೆಯನ್ನು ಹೊರತುಪಡಿಸಿ, ಪ್ರಕರಣಗಳು ಕಡಿಮೆಯಿದ್ದರೆ ಸಾರ್ವಜನಿಕ ಸ್ಥಳಗಳು, ಸೇವೆಗಳು ಮತ್ತು ಸಂಪನ್ಮೂಲಗಳ ಪ್ರವೇಶದಲ್ಲಿ ಲಸಿಕೆ ಹಾಕದ ವ್ಯಕ್ತಿಗಳ ಮೇಲೆ ಯಾವುದೇ ನಿರ್ಬಂಧಗಳನ್ನು ನಾವು ಸೂಚಿಸುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಾರ್ವಜನಿಕ ಸ್ಥಳಗಳನ್ನು ಪ್ರವೇಶಿಸಲು ಜನರು ಕೋವಿಡ್ ಲಸಿಕೆ ಪಡೆಯುವುದು ಅತ್ಯಗತ್ಯವಾಗುವಂತೆ ಅನೇಕ ರಾಜ್ಯಗಳ ನಿಯಮ ವಿಧಿಸಿವೆ. ಸೋಂಕಿನ ಸಂಖ್ಯೆ ಕಡಿಮೆ ಇರುವಾಗ ನಾವು ಸಾರ್ವಜನಿಕ ಸ್ಥಳಗಳು, ಸೇವೆಗಳು ಮತ್ತು ಸಂಪನ್ಮೂಲಗಳ ಪ್ರವೇಶದ ಮೇಲೆ ವ್ಯಕ್ತಿಗಳ ಮೇಲೆ ಯಾವುದೇ ನಿರ್ಬಂಧವನ್ನು ವಿಧಿಸಬಾರದು ಎಂದು ನಾವು ಸೂಚಿಸುತ್ತೇವೆ. ಈಗಾಗಲೇ ನಿರ್ಬಂಧ ಇದ್ದರೆ ಹಿಂಪಡೆಯಿರಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
Supreme Court says no individual can be forced to get vaccinated. The Court also says that it's satisfied that the current vaccine policy can't be said to be unreasonable & manifestly arbitrary.
SC says that govt can form policy&impose some conditions for the larger public good— ANI (@ANI) May 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.