ನವದೆಹಲಿ: ಮೇ 5-7 ರವರೆಗೆ ಗುಜರಾತ್ನ ಕೆವಾಡಿಯಾದಲ್ಲಿರುವ ಏಕತೆಯ ಪ್ರತಿಮೆಯಲ್ಲಿ ಮೂರು ದಿನಗಳ ಆರೋಗ್ಯ ಶೃಂಗಸಭೆಯನ್ನು ಆಯೋಜಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಅವರು ತಿಳಿಸಿದ್ದಾರೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಭಾಗವಹಿಸುವ ಮೂರು ದಿನಗಳ ಈ ಆರೋಗ್ಯ ಶೃಂಗಸಭೆಯಲ್ಲಿ, ಕೋವಿಡ್ ವಿರುದ್ಧ ಭಾರತದ ಹೋರಾಟ ಮತ್ತು ಕೇಂದ್ರದ ಉಪಕ್ರಮ ಕುರಿತು ವಿವರವಾದ ಚರ್ಚೆ ನಡೆಯಲಿದೆ.
“ರಾಜ್ಯಗಳು ಪರಸ್ಪರ ತಮ್ಮ ಅತ್ಯುತ್ತಮ ಆರೋಗ್ಯ ಅಭ್ಯಾಸಗಳನ್ನು ಇತರ ರಾಜ್ಯಗಳೊಂದಿಗೆ ಹಂಚಿಕೊಳ್ಳುವಂತೆ ಮಾಡುವುದು ಶೃಂಗಸಭೆಯ ಸಂಪೂರ್ಣ ಉದ್ದೇಶವಾಗಿದೆ, ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ತಮ್ಮ ಅನುಭವಗಳ ಕುರಿತು ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಮೂರು ನಿಮಿಷಗಳ ಪ್ರಸ್ತುತಿಯನ್ನು ನೀಡಲಿವೆ, ನಂತರ ವಿವಿಧ ಆರೋಗ್ಯ ಮಂತ್ರಿಗಳ ಸಂಕ್ಷಿಪ್ತ ಭಾಷಣ ನೀಡಲಿದ್ದಾರೆ” ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ರಾಜ್ಯಗಳನ್ನು ಉತ್ತೇಜಿಸುವ ಉತ್ತೇಜಿಸುವ ಕಾರ್ಯ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.