ಬೆಂಗಳೂರು: ಕೇಂದ್ರ ಸಹಕಾರಿ ಸಚಿವ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಬೆಂಗಳೂರಿನಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ಬಸವ ಜಯಂತಿ ನಿಮಿತ್ತ ಬೆಳಿಗ್ಗೆ ಬೆಂಗಳೂರಿನಲ್ಲಿ ಬಸವಣ್ಣ ಅವರಿಗೆ ಗೌರವಾರ್ಪಣೆ ನೆರವೇರಿಸಲಿದ್ದಾರೆ. ನಂತರ ನೃಪತುಂಗ ವಿಶ್ವವಿದ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಶ್ರೀ ಕಂಠೀರವ ಹೊರಾಂಗಣ ಸ್ಟೇಡಿಯಂನಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಅಲ್ಲದೆ ಬಿಜೆಪಿ ಕರ್ನಾಟಕ ಪದಾಧಿಕಾರಿಗಳೊಂದಿಗೂ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.