ತಿರುವನಂತಪುರಂ: ಖ್ಯಾತ ಆಧ್ಯಾತ್ಮ ಗುರು ಮಾತಾ ಅಮೃತಾನಂದಮಯಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ‘ನಮಾಮಿ ಗಂಗೆ’ಗೆ 100 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಿದ್ದಾರೆ.
ಅಮ್ಮಾ ಎಂದೇ ಮನೆಮಾತನಾಗಿರುವ ಅಮೃತಾನಂದಮಯಿ ಅವರು ಸೆ.11ರಂದು ಕೊಲ್ಲಂ ಆಶ್ರಮದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ಈ ಭಾರೀ ಮೊತ್ತದ ಹಣವನ್ನು ಹಸ್ತಾಂತರಿಸಲಿದ್ದಾರೆ.
ಗಂಗಾ ಸಮೀಪದ ಪರಿಸರದಲ್ಲಿ ಶೌಚಾಲಯಗಳನ್ನು ನಿರ್ಮಿಸಲು, ಗಂಗೆಯ ಶುದ್ದೀಕರಣಕ್ಕೆ ಈ ಹಣವನ್ನು ವಿನಿಯೋಗಿಸಲಾಗುತ್ತದೆ.
ಕಳೆದ ಮಾರ್ಚ್ 28ರಂದು ನವದೆಹಲಿಯಲ್ಲಿ ಪ್ರಧಾನಿ ಮತ್ತು ಅಮೃತಾನಂದಮಯಿಯವರು ಗಂಗಾ ಶುದ್ಧೀಕರಣ ಯೋಜನೆಯ ಬಗ್ಗೆ ಮಾತುಕತೆ ನಡೆಸಿದ್ದರು. ಅಂದು ಅಮೃತಾನಂದಮಯಿಯವರು ಅವರ ಮಠ ಈ ಯೋಜನೆಯಲ್ಲಿ ಭಾಗಿಯಾಗುವ ಬಗ್ಗೆ ಅವರು ಮಾಹಿತಿ ನೀಡಿದ್ದರು. ಈಗಾಗಲೇ ಅಮೃತಾನಂದಮಯಿ ಮಠ ಸ್ವಚ್ಛಭಾರತ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದೆ. ಇದಕ್ಕೆ ಮೋದಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ಮತ್ತು ಭಾರತದ ಬಾಹ್ಯ ಸೌಂದರ್ಯವನ್ನು ಹೆಚ್ಚಿಸುವ ‘ಅಮಲ ಭಾರತಮ್’ ಎಂಬ ಅಭಿಯಾನವನ್ನು ಅಮೃತಾನಂದಮಯಿ ಮಠ 2010ರಿಂದ ನಡೆಸುತ್ತಾ ಬಂದಿದೆ. ಈ ಅಭಿಯಾನದಡಿ ಲಕ್ಷಾಂತರ ಭಕ್ತರು ದೇಗುಲ, ಸಮುದ್ರ, ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.