ನವದೆಹಲಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಮತ್ತು 4000 ಕೆಜಿ ತೂಕದ ಖಡ್ಗ ಪ್ರಮುಖ ಆಕರ್ಷಣೆಯಾಗಲಿದೆ.
ಸೋಮವಾರ ನವದೆಹಲಿಯಿಂದ ಬೆಂಗಳೂರಿಗೆ ವಿಶೇಷ ಟ್ರಕ್ನಲ್ಲಿ ದೈತ್ಯ ಕತ್ತಿ ಆಗಮಿಸಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಖಡ್ಗವನ್ನು ಸ್ವಾಗತಿಸಿ ಪೂಜೆ ನೆರವೇರಿಸಿದರು.
85 ಕೋಟಿ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣವಾಗುತ್ತಿದೆ. ನೋಯ್ಡಾದ ಪ್ರಸಿದ್ಧ ವಾಸ್ತುಶಿಲ್ಪಿ ರಾಮ್ ವಾನರ್ ಸುತಾರ್ ಅವರು ಪ್ರತಿಮೆಯನ್ನು ಸ್ಥಾಪಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ವಿಮಾನ ನಿಲ್ದಾಣದ ಆವರಣದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ 23 ಎಕರೆ ವಿಸ್ತೀರ್ಣದ ಹೆರಿಟೇಜ್ ಪಾರ್ಕ್ನಲ್ಲಿ ಪ್ರತಿಮೆ ಸ್ಥಾಪನೆಯಾಗಲಿದೆ. ಪಾರ್ಕ್ಗೆ ಬೆಂಗಳೂರು ನಗರದ ಸಂಸ್ಥಾಪಕ ಕೆಂಪೇಗೌಡರ ಹೆಸರನ್ನು ಇಡಲಾಗಿದೆ.
ಈ ವರ್ಷದ ಫೆಬ್ರುವರಿಯಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆದಿಚುಂಚುನಗಿರಿ ಮಠದ ಸ್ವಾಮಿ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ನೋಯ್ಡಾಕ್ಕೆ ಭೇಟಿ ನೀಡಿ ಪ್ರತಿಮೆಯ ಪ್ರಗತಿ ಪರಿಶೀಲಿಸಿದ್ದರು.
ಜೂನ್ 2020 ರಲ್ಲಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೆಂಪೇಗೌಡರ 511 ನೇ ಜನ್ಮ ದಿನಾಚರಣೆಯಂದು ಯೋಜನೆಗೆ ಅಡಿಪಾಯ ಹಾಕಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.