ಬೆಂಗಳೂರು: ಬಸವ ಜಯಂತಿ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳಾದ ಅರುಣ್ ಸಿಂಗ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅರುಣ್ ಸಿಂಗ್ ಅವರು, ಬಸವಣ್ಣನವರು ಸಂಪೂರ್ಣ ಮಾನವ ಸಮಾಜವು ಒಗ್ಗೂಡಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡಿದ್ದಾರೆ. ಕಾಯಕದ ಕುರಿತು ಮಹತ್ವದ ಸಂದೇಶವನ್ನು ಅವರು ನೀಡಿದ್ದಾರೆ ಎಂದರು.
ಬಸವಣ್ಣನವರ ಪರಿಕಲ್ಪನೆ “ಅನುಭವ ಮಂಟಪ” ನಿರ್ಮಾಣ ಕಾರ್ಯಕ್ಕೆ ರಾಜ್ಯದ ಬಿಜೆಪಿ ಸರಕಾರ ಮುಂದಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಬಸವಣ್ಣನವರಿಗೆ ಪುಷ್ಪಾಂಜಲಿ ನೆರವೇರಿಸಿದ್ದು, ಅವರ ಕಾಯಕವೇ ಕೈಲಾಸ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯಲಿದ್ದೇವೆ ಎಂದು ತಿಳಿಸಿದರು. ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರ ಕೊಡಲಾಗದು ಎಂದು ನುಡಿದರು.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ರೈತರು, ಬಡವರಿಗಾಗಿ ಉತ್ತಮ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುತ್ತಿದ್ದಾರೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಲ್ಲಿನ ಜನರು ಬೊಮ್ಮಾಯಿ ಅವರ ಮುಂದಾಳತ್ವ ಬಯಸುತ್ತಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಸಚಿವ ಸಂಪುಟ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಕುರಿತು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.