ನವದೆಹಲಿ: ಉತ್ತರಾಖಂಡ್ನಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಪೌರಿ ಜಿಲ್ಲೆಯ ಪಂಚೂರ್ ಗ್ರಾಮಕ್ಕೆ ಭೇಟಿ ನೀಡಿ ತನ್ನ ತಾಯಿಯ ಆಶೀರ್ವಾದ ಪಡೆದರು. ಅಧಿಕಾರಕ್ಕೆ ಬಂದ ಬಳಿಕ ತನ್ನ ತಾಯಿ ಮತ್ತು ಇತರ ಸಂಬಂಧಿಕರನ್ನು ಭೇಟಿ ಮಾಡಲು ಅವರು ತಮ್ಮ ಪೂರ್ವಜರ ಗ್ರಾಮಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಆದಿತ್ಯನಾಥ್ ಅವರು ತಮ್ಮ ತಾಯಿಯೊಂದಿಗಿನ ಚಿತ್ರವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಯೋಗಿ ಅವರು ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸುವುದನ್ನು ಕಾಣಬಹುದು.
ಯೋಗಿ ಮಂಗಳವಾರ ರಾತ್ರಿ ತಮ್ಮ ಗ್ರಾಮದಲ್ಲಿ ಕಳೆದಿದ್ದಾರೆ ಮತ್ತು ಬುಧವಾರದಂದು ಅವರು ಸೋದರಳಿಯನ ಕೇಶ ಮುಂಡನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜಕೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ಯೋಗಿ ಉತ್ತರಾಖಂಡಕ್ಕೆ ಆಗಾಗ ಭೇಟಿ ನೀಡುತ್ತಿದ್ದರೂ, ತಮ್ಮ ಪೂರ್ವಜರ ಗ್ರಾಮಕ್ಕೆ ಭೇಟಿ ನೀಡಿದ್ದು ಇದೇ ಮೊದಲು.
ಮಂಗಳವಾರ ಮುಂಜಾನೆ, ಯೋಗಿ ಆದಿತ್ಯನಾಥ್ ಅವರು ಪೌರಿ ಜಿಲ್ಲೆಯ ಬಿತ್ಯಾನಿಯಲ್ಲಿರುವ ಗುರು ಗೋರಖಾನಾಥ್ ಮಹಾವಿದ್ಯಾಲಯದಲ್ಲಿ ತಮ್ಮ ಆಧ್ಯಾತ್ಮಿಕ ಗುರು ಮಹಂತ್ ಅವೈದ್ಯನಾಥ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಪೌರಿಯ ಪಂಚೂರ್ ಗ್ರಾಮದಲ್ಲಿ ಜನಿಸಿದ ಯೋಗಿ, 1 ರಿಂದ 9 ನೇ ತರಗತಿಯವರೆಗೆ ಯಮಕೇಶ್ವರದ ಬಳಿಯ ಚಮ್ಕೋಟ್ಖಾಲ್ನ ಶಾಲೆಯಲ್ಲಿ ಓದಿದ್ದಾರೆ.
माँ pic.twitter.com/3YA7VBksMA
— Yogi Adityanath (@myogiadityanath) May 3, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.