ಗುವಾಹಟಿ: ಈಶಾನ್ಯ ಪ್ರದೇಶವು ಇಡೀ ದೇಶದ ಬೆಳವಣಿಗೆಯ ಎಂಜಿನ್ ಆಗಿ ಹೊರಹೊಮ್ಮಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ಅವರು ನಿನ್ನೆ ಸಂಜೆ ಗುವಾಹಟಿಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯ ಆಯೋಜಿಸಿದ್ದ ಈಶಾನ್ಯ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ದೇಶದ ಕೈಗಾರಿಕಾವಾಗಿ ಮುಂದುವರಿದ ರಾಜ್ಯಗಳಿಗೆ ಸರಿಸಮನಾಗಿ ಈಶಾನ್ಯ ರಾಜ್ಯಗಳನ್ನು ಇರಿಸಲು ಈಗ ಪ್ರಯತ್ನಗಳ ಅಗತ್ಯವಿದೆ, ಇದರಿಂದ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದರು.
ಈಶಾನ್ಯ ರಾಜ್ಯಗಳು 3,500 ಕಿಲೋಮೀಟರ್ಗಿಂತ ಹೆಚ್ಚಿನ ಅಂತರರಾಷ್ಟ್ರೀಯ ಗಡಿಗಳನ್ನು ಹೊಂದಿರುವ ದಕ್ಷಿಣ ಏಷ್ಯಾದ ದೇಶಗಳಿಗೆ ನೈಸರ್ಗಿಕ ಹೆಬ್ಬಾಗಿಲು ಮತ್ತು ಅವು ನಮ್ಮ ದೇಶಕ್ಕೆ ಕಾರ್ಯತಂತ್ರವಾಗಿ ಮಹತ್ವದ್ದಾಗಿವೆ ಎಂದು ಹೇಳಿದರು.
ಆಕ್ಟ್ ಈಸ್ಟ್ ನೀತಿಯು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಮಾದರಿ ಬದಲಾವಣೆಯನ್ನು ಮಾಡಿದೆ ಎಂದು ಕೋವಿಂದ್ ಅಭಿಪ್ರಾಯಿಸಿದರು.
ಈ ವೇಳೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರು. ಪ್ರಸ್ತುತ ಸರ್ಕಾರದ ಅಡಿಯಲ್ಲಿ ಈಶಾನ್ಯ ರಾಜ್ಯಗಳು ವೇಗವಾಗಿ ಪ್ರಗತಿ ಸಾಧಿಸುತ್ತಿವೆ ಮತ್ತು ನಮ್ಮ ಸರ್ಕಾರವು ಎಲ್ಲಾ ನೆರೆಯ ರಾಜ್ಯಗಳೊಂದಿಗಿನ ಗಡಿ ಸಮಸ್ಯೆಗಳನ್ನು ಚರ್ಚೆಯ ಮೂಲಕ ಪರಿಹರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಏಪ್ರಿಲ್ 28 ರಿಂದ ಎಂಟು ಈಶಾನ್ಯ ರಾಜ್ಯಗಳಾದ್ಯಂತ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ವಾರದ ಆಚರಣೆಗನ್ನು ಆಯೋಜನೆಗೊಳಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.