ಚಂಡೀಗಢ: ನಾಲ್ವರು ಶಂಕಿತ ಖಲಿಸ್ತಾನಿ ಭಯೋತ್ಪಾದಕರನ್ನು ಹರಿಯಾಣದ ಟೋಲ್ ಪ್ಲಾಜಾವೊಂದರಲ್ಲಿ ಬಂಧಿಸಲಾಗಿದ್ದು, ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಬಂಧಿತರಾಗಿರುವ ಗುರ್ಪ್ರೀತ್ ಮತ್ತು ಇತರ ಮೂವರು ಸ್ಫೋಟಕಗಳ ಸರಕುಗಳನ್ನು ಭಾರತದಾದ್ಯಂತ ತಲುಪಿಸುತ್ತಿದ್ದರು ಮತ್ತು ಈ ನಾಲ್ವರು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ಗುರ್ಪ್ರೀತ್ ಈ ಹಿಂದೆ ಜೈಲಿನಲ್ಲಿದ್ದು, ಅಲ್ಲಿ ಪಾಕಿಸ್ಥಾನದೊಂದಿಗೆ ಸಂಪರ್ಕ ಹೊಂದಿದ್ದ ರಾಜಬೀರ್ನನ್ನು ಭೇಟಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಳಿ ಬಣ್ಣದ ಟೊಯೊಟಾ ಇನ್ನೋವಾ ಎಸ್ಯುವಿಯಲ್ಲಿ ದೆಹಲಿಗೆ ತೆರಳುತ್ತಿದ್ದಾಗ ಕರ್ನಾಲ್ನ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಮುಂಜಾನೆ 4 ಗಂಟೆಗೆ ಅವರನ್ನು ಬಂಧಿಸಲಾಯಿತು. ಇತರ ಮೂವರು ಶಂಕಿತರನ್ನು ಪಂಜಾಬ್ ನಿವಾಸಿಗಳಾದ ಭೂಪೇಂದ್ರ, ಅಮನದೀಪ್ ಮತ್ತು ಪರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.
ಈ ನಾಲ್ವರು ಶಂಕಿತರು ಪಾಕಿಸ್ಥಾನದಲ್ಲಿದ್ದ ಇನ್ನೊಬ್ಬ ಭಯೋತ್ಪಾದಕ ಹರ್ವಿಂದರ್ ಸಿಂಗ್ ಆದೇಶದಂತೆ ನಡೆದುಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ವರಿಗೆ ಭಾರತದಾದ್ಯಂತ ವಿತರಿಸಲು ಸುಧಾರಿತ ಸ್ಫೋಟಕ ಸಾಧನಗಳು ಅಥವಾ IED ಗಳನ್ನು ನೀಡಲಾಗಿತ್ತು. ಅವರು ಐಇಡಿಗಳನ್ನು ತೆಲಂಗಾಣಕ್ಕೆ ಪೂರೈಕೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶಂಕಿತ ಭಯೋತ್ಪಾದಕರು ಈ ಹಿಂದೆ ಕನಿಷ್ಠ ಎರಡು ಸ್ಥಳಗಳಿಗೆ ಐಇಡಿಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದ್ದರು.
ಶಂಕಿತರಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಒಂದು ದೇಶ ನಿರ್ಮಿತ ಪಿಸ್ತೂಲ್, 31 ಗುಂಡುಗಳು ಮತ್ತು ಐಇಡಿ ಇರುವ ಮೂರು ಕಬ್ಬಿಣದ ಕಂಟೈನರ್ಗಳು ಸೇರಿವೆ. ಇವರ ಬಳಿ ರೂ 1.3 ಲಕ್ಷ ನಗದು ಪತ್ತೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.