ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿವಿಧ ಅಂಶಗಳನ್ನು ಪರಿಶೀಲಿಸುವ ಸಲುವಾಗಿ ಸಭೆ ನಡೆಸಿದ್ದು, ಆಹಾರ ಧಾನ್ಯ ಮತ್ತು ಇತರ ಕೃಷಿ ಉತ್ಪನ್ನಗಳ ಖಚಿತ ಮೂಲವಾಗಿ ವಿಕಸನಗೊಳ್ಳಲು ಗುಣಮಟ್ಟದ ಮಾನದಂಡಗಳು ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ಗೆ ಮೂರು ದಿನಗಳ ಭೇಟಿಯಿಂದ ಮೋದಿ ಹಿಂದಿರುಗಿದ ಗಂಟೆಗಳ ನಂತರ ಈ ಮಹತ್ವದ ಸಭೆಯನ್ನು ಮೋದಿ ನಡೆಸಿದ್ದಾರೆ.
ಸಭೆಯಲ್ಲಿ ಗೋಧಿ ಪೂರೈಕೆ, ದಾಸ್ತಾನು ಮತ್ತು ರಫ್ತಿನ ವಿವಿಧ ಅಂಶಗಳನ್ನು ಪರಿಶೀಲಿಸಿದ್ದಾರೆ. ಅವರಿಗೆ ಸಮಸ್ಯೆಗಳ ಕುರಿತು ಅಧಿಕಾರಿಗಳು ವಿವರವಾದ ಪ್ರಸ್ತುತಿ ನೀಡಿದ್ದಾರೆ ಮತ್ತು ಬೆಳೆ ಉತ್ಪಾದನೆಯ ಮೇಲೆ ಮಾರ್ಚ್ನಿಂದ ಏಪ್ರಿಲ್ವರೆಗೆ ಅಧಿಕ ತಾಪಮಾನದ ಪ್ರಭಾವದ ಬಗ್ಗೆ ವಿವರಿಸಿದ್ದಾರೆ.
ಸಭೆಯಲ್ಲಿ ಗೋಧಿಯ ಸಂಗ್ರಹಣೆ ಮತ್ತು ರಫ್ತಿನ ಸ್ಥಿತಿಯನ್ನು ಸಹ ಸಭೆಯಲ್ಲಿ ಪರಿಶೀಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಭಾರತದ ಕೃಷಿ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆಯಲ್ಲಿ ಭಾರತವು ಆಹಾರ ಧಾನ್ಯ ಮತ್ತು ಇತರ ಕೃಷಿ ಉತ್ಪನ್ನಗಳ ಖಚಿತ ಮೂಲವಾಗಿ ವಿಕಸನಗೊಳ್ಳಲು ಗುಣಮಟ್ಟದ ಮಾನದಂಡಗಳನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಮಂತ್ರಿ ನಿರ್ದೇಶನ ನೀಡಿದರು. ರೈತರಿಗೆ ಗರಿಷ್ಠ ಸಹಾಯವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ರೈತರಿಗೆ ಲಾಭದಾಯಕವಾಗಿರುವ ಮಾರುಕಟ್ಟೆ ದರಗಳ ಬಗ್ಗೆಯೂ ಅವರು ವಿವರಿಸಿದರು.
ಸಭೆಯಲ್ಲಿ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಸಲಹೆಗಾರರು, ಕ್ಯಾಬಿನೆಟ್ ಕಾರ್ಯದರ್ಶಿ, ಆಹಾರ ಮತ್ತು ಸಾರ್ವಜನಿಕ ವಿತರಣಾ ಯೋಜನೆ ಮತ್ತು ಕೃಷಿ ಇಲಾಖೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.