ನವದೆಹಲಿ: ಭಾರತದಲ್ಲಿ ಕೋವಿಡ್ ಸಂಬಂಧಿತ ಸಾವುಗಳ ಅಂದಾಜು ವರದಿಯನ್ನು ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಭಾರತದಲ್ಲಿ ಅಸಮಧಾನ ವ್ಯಕ್ತವಾಗಿದೆ. ಇದು ಆಧಾರರಹಿತ ಮತ್ತು ದೇಶವನ್ನು ಕಳಪೆ ಪಟ್ಟದಲ್ಲಿ ತೋರಿಸುವ ಉದ್ದೇಶ ಹೊಂದಿದೆ ಎಂದು ಸೆಂಟ್ರಲ್ ಕೌನ್ಸಿಲ್ ಆಫ್ ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ (CCHFW) ನ 14 ನೇ ಸಮ್ಮೇಳನದಲ್ಲಿ ಭಾಗವಹಿಸಿದ ವಿವಿಧ ರಾಜ್ಯಗಳ ಆರೋಗ್ಯ ಮಂತ್ರಿಗಳು ಹೇಳಿದ್ದಾರೆ.
ಸಾವುಗಳನ್ನು ನೋಂದಾಯಿಸಲು ಭಾರತವು ದೃಢವಾದ, ದಕ್ಷ ಮತ್ತು ಸಮಗ್ರ ವ್ಯವಸ್ಥೆಯನ್ನು ಹೊಂದಿದೆ ಮತ್ತು ಕಾನೂನು ಪ್ರಕ್ರಿಯೆಯನ್ನು ಅನುಸರಿಸಿ ಎಲ್ಲಾ ಕೋವಿಡ್ ಸಾವುಗಳನ್ನು ವ್ಯವಸ್ಥಿತವಾಗಿ ಪಾರದರ್ಶಕವಾಗಿ ದಾಖಲಿಸಲಾಗಿದೆ ಎಂದು ಭಾರತ ಹೇಳದೆ,
ಶುಕ್ರವಾರ, ಭಾರತದಲ್ಲಿ ಕೋವಿಡ್ ಸಾವುಗಳ ಡಬ್ಲ್ಯುಎಚ್ಒ ನ ಅಂದಾಜುಗಳನ್ನು ಬಲವಾಗಿ ವಿರೋಧಿಸುವ ನಿರ್ಣಯವನ್ನು ಸಮ್ಮೇಳನದಲ್ಲಿ ಅಂಗೀಕರಿಸಲಾಯಿತು.
ಡಬ್ಲ್ಯುಎಚ್ಒ ಅಂದಾಜು ಭಾರತಕ್ಕೆ ಸ್ವೀಕಾರಾರ್ಹವಲ್ಲ ಎಂದು ಅದು ಹೇಳಿದೆ ಮತ್ತು ಅಂಕಿಅಂಶವನ್ನು ತಲುಪಲು ಜಾಗತಿಕ ಆರೋಗ್ಯ ಸಂಸ್ಥೆ ಬಳಸಿದ ವಿಧಾನವು ದೋಷಪೂರಿತವಾಗಿದೆ ಎಂದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉನ್ನತ ಸಲಹಾ ಸಂಸ್ಥೆಯಾದ CCHFW ನ ಮೂರು ದಿನಗಳ ಸಮ್ಮೇಳನ ಗುರುವಾರ ಗುಜರಾತ್ನ ಕೆವಾಡಿಯಾದಲ್ಲಿ ಪ್ರಾರಂಭವಾಯಿತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕದ ಆರೋಗ್ಯ ಸಚಿವ ಕೆ ಸುಧಾಕರ್ ಅವರು ಸಾವಿನ ಅಂದಾಜನ್ನು ತಲುಪುವಲ್ಲಿ ಡಬ್ಲ್ಯುಎಚ್ಒ ಬಳಸಿದ ಮಾಡೆಲಿಂಗ್ ವಿಧಾನವನ್ನು ಪ್ರಶ್ನಿಸಿದ್ದಾರೆ, ಇದು ಭಾರತದ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.