ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMJJBY), ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMSBY), ಮತ್ತು ಅಟಲ್ ಪಿಂಚಣಿ ಯೋಜನೆ (APY) ಇಂದು ಏಳು ವರ್ಷಗಳನ್ನು ಪೂರೈಸಿದೆ.
ಈ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು 9 ಮೇ 2015 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಪ್ರಾರಂಭಿಸಿದ್ದರು. ಈ ಯೋಜನೆಗಳು ಜನರಿಗೆ ಕೈಗೆಟುಕುವ ವಿಮೆ ಮತ್ತು ಭದ್ರತೆಯನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ. ಅನಿರೀಕ್ಷಿತ ಅಪಾಯಗಳು ಅಥವಾ ನಷ್ಟಗಳು ಮತ್ತು ಆರ್ಥಿಕ ಅನಿಶ್ಚಿತತೆಗಳಿಂದ ಜನರ ಜೀವನವನ್ನು ಸುರಕ್ಷಿತಗೊಳಿಸುವ ಅಗತ್ಯವನ್ನು ಗುರುತಿಸಿ, ಈ ಮೂರು ಸಾಮಾಜಿಕ ಭದ್ರತಾ ಯೋಜನೆಗಳನ್ನು ತರಲಾಗಿದೆ.
ದೇಶದ ಅಸಂಘಟಿತ ವರ್ಗದ ಜನರು ಆರ್ಥಿಕವಾಗಿ ಸುರಕ್ಷಿತವಾಗಿರುವುದನ್ನು ಈ ವಿಮಾ ಯೋಜನೆ ಖಚಿತಪಡಿಸುತ್ತದೆ.
ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯು ಜನರಿಗೆ ಕಡಿಮೆ ವೆಚ್ಚದ ಜೀವನ ಅಥವಾ ಆಕಸ್ಮಿಕ ವಿಮಾ ರಕ್ಷಣೆಗೆ ಪ್ರವೇಶವನ್ನು ಒದಗಿಸಿದರೆ, ಅಟಲ್ ಪಿಂಚಣಿ ಯೋಜನೆಯು ವೃದ್ಧಾಪ್ಯದಲ್ಲಿ ಪಿಂಚಣಿ ಪಡೆಯಲು ಉಳಿತಾಯಕ್ಕೆ ಅವಕಾಶವನ್ನು ಒದಗಿಸುತ್ತದೆ. ಕಳೆದ ತಿಂಗಳ 27 ರವರೆಗೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಡಿ ಒಟ್ಟು ದಾಖಲಾತಿಗಳು 12.76 ಕೋಟಿಗೂ ಹೆಚ್ಚು ಮತ್ತು 5 ಲಕ್ಷ 76 ಸಾವಿರಕ್ಕೂ ಹೆಚ್ಚು ಕ್ಲೈಮ್ಗಳಿಗೆ ರೂ 11,522 ಕೋಟಿ ಮೊತ್ತವನ್ನು ಪಾವತಿಸಲಾಗಿದೆ.
ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ಒಟ್ಟು ದಾಖಲಾತಿಗಳು 28.37 ಕೋಟಿಗಿಂತ ಹೆಚ್ಚಿವೆ ಮತ್ತು 97 ಸಾವಿರಕ್ಕೂ ಹೆಚ್ಚು ಕ್ಲೈಮ್ಗಳಿಗೆ 1,930 ಕೋಟಿ ರೂಪಾಯಿಗಳನ್ನು ಪಾವತಿಸಲಾಗಿದೆ. 4 ಕೋಟಿಗೂ ಹೆಚ್ಚು ವ್ಯಕ್ತಿಗಳು ಅಟಲ್ ಪಿಂಚಣಿ ಯೋಜನೆಗೆ ಚಂದಾದಾರರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.