ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಪ್ರಯತ್ನದಿಂದ ಅಸ್ಸಾಂನಲ್ಲಿ ಶಾಂತಿ ನೆಲೆಸಿದೆ. ಕಳೆದ ಏಳು ವರ್ಷಗಳಲ್ಲಿ ಒಂಬತ್ತು ಸಾವಿರಕ್ಕೂ ಹೆಚ್ಚು ಉಗ್ರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ್ದಾರೆ ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂನ ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದ ತಮುಲ್ಪುರದಲ್ಲಿ ಬಿಎಸ್ಎಫ್ಗಳ ಸೆಂಟ್ರಲ್ ಸ್ಟೋರ್ ಮತ್ತು ವರ್ಕ್ಶಾಪ್ನ ಶಂಕುಸ್ಥಾಪನೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗದ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ನಂತರ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಬೋಡೋ ಒಪ್ಪಂದಕ್ಕೆ ಸಹಿ ಹಾಕಿರುವುದು ಬೋಡೋಲ್ಯಾಂಡ್ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಹೆಗ್ಗುರುತಾಗಿದೆ. ಒಪ್ಪಂದದ 90 ರಷ್ಟು ಷರತ್ತುಗಳನ್ನು ಕೇಂದ್ರ ಮತ್ತು ಅಸ್ಸಾಂ ಸರ್ಕಾರವು ಪೂರೈಸಿದೆ ಎಂದು ಅವರು ಹೇಳಿದರು.
ಬೋಡೋಲ್ಯಾಂಡ್ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ತಮುಲ್ಪುರದಲ್ಲಿ ಸೆಂಟ್ರಲ್ ಸ್ಟೋರ್ನ ನಿರ್ಮಾಣವು ಪ್ರದೇಶಕ್ಕೆ ಮತ್ತು ಈ ಪ್ರದೇಶದಲ್ಲಿ ನಿಯೋಜಿಸಲಾದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇದರಿಂದ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು.
ಮತ್ತೊಂದೆಡೆ, ಕೆವಿಐಸಿ ದೇಶದಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಸಿದೆ ಎಂದು ಸಚಿವರು ಪ್ರಸ್ತಾಪಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಉಪಕ್ರಮದಿಂದಾಗಿ ಕೆವಿಐಸಿ ಉತ್ಪನ್ನಗಳ ಮಾರಾಟದಲ್ಲಿ ಶೇ.250ರಷ್ಟು ಹೆಚ್ಚಳವಾಗಿದೆ. ದೇಶಾದ್ಯಂತ ಭದ್ರತಾ ಪಡೆಗಳ ಕ್ಯಾಂಟೀನ್ಗಳಲ್ಲಿ ಖಾದಿ ಉತ್ಪನ್ನಗಳನ್ನು ಹಂತ ಹಂತವಾಗಿ ಲಭ್ಯವಾಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.
ಅಸ್ಸಾಂನ ರೈತರನ್ನು ಮತ್ತು ವಿಶೇಷವಾಗಿ ಬೋಡೋಲ್ಯಾಂಡ್ ಪ್ರದೇಶಗಳ ರೈತರನ್ನು ಹನಿ ಮಿಷನ್ನಲ್ಲಿ ತೊಡಗಿಸಿಕೊಳ್ಳುವಂತೆ ಅವರು KVIC ಯನ್ನು ಕೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.