ನವದೆಹಲಿ: 1857 ರ ಮೇ 10ರಂದು ಭಾರತದ ಐತಿಹಾಸಿಕ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ಪ್ರಾರಂಭಗೊಂಡಿತು. ಬ್ರಿಟಿಷ್ ಆಡಳಿತ ವಿರುದ್ಧ ಉತ್ತರ ಮತ್ತು ಮಧ್ಯ ಭಾರತದಲ್ಲಿ ಶಸ್ತ್ರಸಜ್ಜಿತ ಬಂಡಾಯ ಇದಾಗಿದ್ದು, ನಾಗರಿಕರ ಹೋರಾಟವನ್ನು ತೀವ್ರಗೊಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಇದನ್ನು ಸಿಪಾಯಿ ದಂಗೆ ಎಂದೂ ಕರೆಯಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿಯವರು ಈ ದಿನದ ಸ್ಮರಣಾರ್ಥ ಟ್ವಿಟ್ ಮಾಡಿದ್ದು, “1857 ರ ಈ ದಿನದಂದು ಐತಿಹಾಸಿಕ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ಪ್ರಾರಂಭವಾಯಿತು, ಇದು ನಮ್ಮ ಸಹವರ್ತಿ ನಾಗರಿಕರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ದುರ್ಬಲಗೊಳಿಸಲು ಕೊಡುಗೆ ನೀಡಿತು. 1857 ರ ಘಟನೆಗಳ ಭಾಗವಾಗಿದ್ದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ” ಎಂದಿದ್ದಾರೆ..
ಸಿಪಾಯಿ ದಂಗೆ ಭಾರತೀಯರು ಮತ್ತು ಅವರ ಬ್ರಿಟಿಷ್ ಅಧಿಕಾರಿಗಳ ನಡುವೆ ಭುಗಿಲೆದ್ದ ಅಸಮಾಧಾನದ ಜ್ವಾಲೆಯಾಗಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ ಕೊನೆಗೊಂಡಿತು. ಈ ದಂಗೆ ನಾಗರಿಕರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ದುರ್ಬಲಗೊಳಿಸಲು ಕೊಡುಗೆ ನೀಡಿತು.
On this day in 1857 began the historic First War of Independence, which ignited a spirit of patriotism among our fellow citizens and contributed to the weakening of colonial rule. I pay homage to all those who were a part of the events of 1857 for their outstanding courage.
— Narendra Modi (@narendramodi) May 10, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.