ಶಿಮ್ಲಾ: ಮೇ 12 ರಿಂದ ಮೇ 15 ರವರೆಗೆ ಯಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಧರ್ಮಶಾಲಾ ಶಾಸಕ ವಿಶಾಲ್ ತಿಳಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಬಿ ನೆಹ್ರಿಯಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಇತರ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರು ಈ ಕಾರ್ಯಕ್ರಮಕ್ಕೆ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.
ಮೂರು ದಿನಗಳ ಅಧಿವೇಶನದಲ್ಲಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಕೂಡ ಭಾಗವಹಿಸಲಿದ್ದಾರೆ. ದೇಶದಾದ್ಯಂತ 139 ಪ್ರತಿನಿಧಿಗಳು ಅಧಿವೇಶನದಲ್ಲಿ ತಮ್ಮ ಉಪಸ್ಥಿತಿಯನ್ನು ನೋಂದಾಯಿಸಲಿದ್ದಾರೆ. ಬಿಜೆಪಿಯ ರಾಷ್ಟ್ರೀಯ ನಾಯಕತ್ವ ಮತ್ತು ಹಿಮಾಚಲ ಪ್ರದೇಶದ ನಾಯಕತ್ವ ಭಾಗಿಯಾಗಲಿದೆ ಎಂದಿದ್ದಾರೆ.
ದ್ರಾವಿಡ್ ಅವರ ಉಪಸ್ಥಿತಿಯು ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸ್ಪೂರ್ತಿಯನ್ನು ನೀಡುತ್ತದೆ ಎಂದು ನೆಹ್ರಿಯಾ ಹೇಳಿದ್ದಾರೆ.
“ಭಾರತೀಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ. ಅವರ ಯಶಸ್ಸಿನಿಂದ ನಾವು ರಾಜಕೀಯದಲ್ಲಿ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮುಂದುವರಿಯಬಹುದು ಎಂಬ ಸಂದೇಶವನ್ನು ಯುವಕರಿಗೆ ನೀಡಲಾಗುವುದು” ಎಂದಿದ್ದಾರೆ.
ಈ ವರ್ಷ ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಸಭೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.