ನವದೆಹಲಿ: ಶ್ರೀಲಂಕಾದ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭಾರತ ಹೇಳಿದೆ.
ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಆರ್ಥಿಕ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸಿದ ರೀತಿಯ ವಿರುದ್ಧ ದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಒಂದು ದಿನದ ನಂತರ ಭಾರತದಿಂದ ಈ ಹೇಳಿಕೆ ಹೊರಬಿದ್ದಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡಿ, “ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಮೂಲಕ ವ್ಯಕ್ತಪಡಿಸಲಾದ ಶ್ರೀಲಂಕಾದ ಜನರ ಉತ್ತಮ ಹಿತಾಸಕ್ತಿಗಳಿಂದ ಭಾರತವು ಯಾವಾಗಲೂ ಮಾರ್ಗದರ್ಶನ ಪಡೆಯುತ್ತದೆ” ಎಂದು ಹೇಳಿದರು.
ಶ್ರೀಲಂಕಾದಲ್ಲಿನ ಬೆಳವಣಿಗೆಗಳ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದ ಅವರು, “ಶ್ರೀಲಂಕಾದ ನಿಕಟ ನೆರೆಯ ರಾಷ್ಟ್ರವಾಗಿ, ಐತಿಹಾಸಿಕ ಸಂಬಂಧಗಳೊಂದಿಗೆ ಭಾರತವು ಅದರ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಸಂಪೂರ್ಣ ಬೆಂಬಲವನ್ನು ನೀಡಲಿದೆ” ಎಂದಿದ್ದಾರೆ.
ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಶ್ರೀಲಂಕಾಕ್ಕೆ ಸಹಾಯ ಮಾಡಲು ಭಾರತ ನೀಡಿದ ನೆರವನ್ನೂ ಅವರು ಉಲ್ಲೇಖಿಸಿದ್ದಾರೆ.
“ಇದಲ್ಲದೆ, ಆಹಾರ, ಔಷಧಿ ಮುಂತಾದ ಅಗತ್ಯ ವಸ್ತುಗಳ ಕೊರತೆಯನ್ನು ತಗ್ಗಿಸಲು ಭಾರತದ ಜನರು ನೆರವು ನೀಡಿದ್ದಾರೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.