ನವದೆಹಲಿ: ಕೇಂದ್ರದ ಎನ್ಡಿಎ ಸರಕಾರದ ಎಂಟನೇ ವರ್ಷಾಚರಣೆಗೂ ಮುನ್ನ ನರೇಂದ್ರ ಮೋದಿ ನೇತೃತ್ವದ ಸರಕಾರ ಮಾಡಿರುವ ಕೆಲಸಗಳನ್ನು ಜನರ ಬಳಿಗೆ ಕೊಂಡೊಯ್ಯುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ನಾಯಕರಿಗೆ ಟಾಸ್ಕ್ ನೀಡಿದ್ದಾರೆ.
ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮೇ 26, 2014 ರಂದು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜನರನ್ನು ತಲುಪುವಂತೆ ಮತ್ತು ಅವರ ಜೀವನವನ್ನು ವಿಶೇಷವಾಗಿ ಸಮಾಜದ ಬಡ ಮತ್ತು ವಂಚಿತ ವರ್ಗಗಳ ಉನ್ನತಿಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ನಡ್ಡಾ ಅವರು ಬಿಜೆಪಿಗರಿಗೆ ಕರೆ ನೀಡಿದ್ದಾರೆ.
“8 ವರ್ಷಗಳು: ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣ” ಕಾರ್ಯಕ್ರಮದ ಭಾಗವಾಗಿ ಮೇ 30 ರಿಂದ ಜೂನ್ 15 ರವರೆಗೆ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಲು ಪಕ್ಷವು ಯೋಜಿಸುತ್ತಿದೆ. 15 ದಿನಗಳ ಪ್ರಚಾರದ ಸಮಯದಲ್ಲಿ 75 ಗಂಟೆಗಳ ಕಾಲ ಸಾರ್ವಜನಿಕರೊಂದಿಗೆ ಸಂವಾದವನ್ನು ಯೋಜಿಸಲು ಬಿಜೆಪಿ ಕಾರ್ಯಕರ್ತರಿಗೆ ತಿಳಿಸಲಾಗಿದೆ.
ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಸಿನಿಮಾ ಹಾಲ್ಗಳಲ್ಲಿ ಕೇಂದ್ರದ ವಿವಿಧ ಕಲ್ಯಾಣ ಯೋಜನೆಗಳ ಜಾಹೀರಾತು ಹಾಕಲು ನಾಯಕರಿಗೆ ನಿರ್ದೇಶನ ನೀಡಲಾಗಿದೆ. ನಡ್ಡಾ ಅವರು ಚಾಲನೆ ನೀಡುವ `ರಿಪೋರ್ಟ್ ಟು ನೇಷನ್’ ಅಭಿಯಾನದ ಅಡಿಯಲ್ಲಿ, ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪರಿಶಿಷ್ಟ ಜಾತಿಗಳು (SCs), ಮತ್ತು ಪರಿಶಿಷ್ಟ ಪಂಗಡಗಳು (STs) ಮತ್ತು ಮಹಿಳೆಯರು ಸೇರಿದಂತೆ ಸಂವಾದ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತದೆ.
ಬಿಜೆಪಿಯ ಯುವ ಘಟಕವು ಜೂನ್ 7 ಮತ್ತು 13 ರ ನಡುವೆ ದೇಶದ ವಿವಿಧ ಜಿಲ್ಲೆಗಳಲ್ಲಿ `ವಿಕಾಸ್ ತೀರ್ಥ~ ಬೈಕ್ ರ್ಯಾಲಿಯನ್ನು ಆಯೋಜಿಸಲಿದ್ದು, ಸಚಿವರು ಸಹ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.