ನವದೆಹಲಿ: ಉದ್ಯಮ ಮತ್ತು ರಫ್ತು ಬೆಳವಣಿಗೆಗೆ ಸುಲಲಿತ ವ್ಯಾಪಾರವನ್ನು ಸುಧಾರಿಸುವುದನ್ನು ಕೇಂದ್ರ ಸರ್ಕಾರ ಮುಂದುವರೆಸಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಅವರು ನಿನ್ನೆ ಭಾರತ-ಯುಎಇ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ ಮತ್ತು ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದದ ಕುರಿತು ಚೆನ್ನೈನಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಫ್ತುದಾರರೊಂದಿಗೆ ಮಾತನಾಡಿದರು.
ಮೂಲಸೌಕರ್ಯವು ಉದ್ಯಮದಲ್ಲಿ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಆದ್ದರಿಂದ ಕೇಂದ್ರ ಬಜೆಟ್ನಲ್ಲಿ ದೇಶದ ಮೂಲಸೌಕರ್ಯವನ್ನು ಸುಧಾರಿಸಲು 7.5 ಲಕ್ಷ ಕೋಟಿ ರೂಪಾಯಿಗಳನ್ನು ನಿಗದಿಪಡಿಸಿದೆ ಎಂದು ಹೇಳಿದರು.
ಗುಣಮಟ್ಟದ ವಿದ್ಯುತ್ನ ತಡೆರಹಿತ ಪೂರೈಕೆಯನ್ನು ಖಚಿತಪಡಿಸಿಕೊಳ್ಳಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕರೆ ನೀಡಿದ ಅವರು, ಹಸಿರು ಇಂಧನ ಉತ್ಪಾದನೆಗೆ ಒತ್ತು ನೀಡುವಂತೆ ಸೂಚಿಸಿದರು. ಎರಡು ದ್ವಿಪಕ್ಷೀಯ ವ್ಯಾಪಾರ ಒಪ್ಪಂದಗಳನ್ನು ಬಳಸಿಕೊಳ್ಳಲು ರಫ್ತುದಾರರು ಯುಎಇ ಮತ್ತು ಆಸ್ಟ್ರೇಲಿಯಾದ ಉದ್ಯಮಿಗಳೊಂದಿಗೆ ಜಂಟಿ ಉದ್ಯಮಗಳನ್ನು ರೂಪಿಸಬೇಕು ಎಂದು ಅವರು ಹೇಳಿದರು.
ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು ಮಾತನಾಡಿ, ಯುಎಇ ಮತ್ತು ಆಸ್ಟ್ರೇಲಿಯಾದೊಂದಿಗಿನ ಎರಡು ಬ್ಯಾಕ್ ಟು ಬ್ಯಾಕ್ ವ್ಯಾಪಾರ ಒಪ್ಪಂದಗಳನ್ನು ದಾಖಲೆ ಸಮಯದಲ್ಲಿ ಅಂತಿಮಗೊಳಿಸಲಾಗಿದೆ. ಇದು ಭಾರತೀಯ ರಫ್ತು ವಲಯದಲ್ಲಿ ಮಹತ್ವ ಕ್ಷಣಗಳಾಗಿವೆ. ಕಳೆದ ಹಣಕಾಸು ವರ್ಷದಲ್ಲಿ ಭಾರತವು 600 ಶತಕೋಟಿ ಡಾಲರ್ ರಫ್ತು ಗುರಿಯನ್ನು ಮೀರಿದೆ ಮತ್ತು 675 ಶತಕೋಟಿ ಡಾಲರ್ಗಳ ಐತಿಹಾಸಿಕ ಅಂಕಿಅಂಶವನ್ನು ತಲುಪಿದೆ. ಕೋವಿಡ್ ಸಾಂಕ್ರಾಮಿಕ ಮತ್ತು ಜಾಗತಿಕ ಪೂರೈಕೆ ಸರಪಳಿ ಸ್ಥಗಿತದ ಸವಾಲುಗಳ ನಡುವೆಯೂ ಈ ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.