ನವದೆಹಲಿ: ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB- PMJAY) ಅಡಿಯಲ್ಲಿ ಇದುವರೆಗೆ 18 ಕೋಟಿ ಆಯುಷ್ಮಾನ್ ಕಾರ್ಡ್ಗಳನ್ನು ನೀಡಲಾಗಿದೆ. ಜನರಿಗೆ ಆರೋಗ್ಯ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಟ್ವೀಟ್ನಲ್ಲಿ ಈ ಯೋಜನೆಯು ಬಡ ಜನರಿಗೆ ವರದಾನ ಎಂದು ಸಾಬೀತಾಗಿದೆ. ಈ ಯೋಜನೆಯಡಿ 3 ಕೋಟಿ 20 ಲಕ್ಷಕ್ಕೂ ಹೆಚ್ಚು ಜನರು ಆಸ್ಪತ್ರೆ ಸೌಲಭ್ಯಗಳ ಪ್ರಯೋಜನ ಪಡೆದಿದ್ದು, ಆಸ್ಪತ್ರೆ ದಾಖಲಾತಿ ಮೊತ್ತ 37,398 ಕೋಟಿ ರೂಪಾಯಿ ಆಗಿದೆ ಎಂದಿದ್ದಾರೆ.
AB-PMJAY ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 23ನೇ ಸೆಪ್ಟೆಂಬರ್ 2018 ರಂದು ಪ್ರಾರಂಭಿಸಿದರು, ಇದು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ಸುರಕ್ಷತೆಯ ಭರವಸೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.