ಶ್ರೀನಗರ: ಕಣಿವೆಯಲ್ಲಿನ ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರ ವಸತಿ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುವುದು ಮತ್ತು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ ಘಟನೆಯ ಬಗ್ಗೆ ತನಿಖೆಯನ್ನು ನಡೆಸುವುದಾಗಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಹೇಳಿದ್ದಾರೆ.
ಗುರುವಾರ ಕಾಶ್ಮೀರಿ ಪಂಡಿತ್ ಮತ್ತು ಸರ್ಕಾರಿ ನೌಕರ ರಾಹುಲ್ ಭಟ್ ಅವರ ಹತ್ಯೆಯನ್ನು ಖಂಡಿಸಿ ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು ಮತ್ತು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಯಿತು.
ಪ್ರತಿಭಟನೆ ಬಳಿಕ ಜಮ್ಮು-ಕಾಶ್ಮೀರ ಆಡಳಿತ ಹತ್ಯೆಯ ತನಿಖೆಗಾಗಿ ಎಸ್ಐಟಿಯನ್ನು ರಚಿಸಿದೆ.
ಈ ಬಗ್ಗೆ ಮಾತನಾಡಿದ ಸಿನ್ಹಾ, “ನಾವು ಈ ವಿಷಯದ ಬಗ್ಗೆ ಎಸ್ಐಟಿಯನ್ನು ರಚಿಸಿದ್ದೇವೆ ಮತ್ತು ಅದು ಎಲ್ಲಾ ಸಂಗತಿಗಳನ್ನು ತನಿಖೆ ಮಾಡುತ್ತದೆ. ಪಿಎಂ ಪ್ಯಾಕೇಜ್ಗಾಗಿ ಕೆಲಸ ಮಾಡುತ್ತಿರುವ ನೌಕರರು, ಪೊಲೀಸರು ತಮ್ಮ ವಿರುದ್ಧ ಬಲಪ್ರಯೋಗ ಮಾಡಿದ್ದಾರೆ ಎಂದು ದೂರಿದ್ದಾರೆ, ಈ ಘಟನೆಯ ಬಗ್ಗೆಯೂ ಎಸ್ಐಟಿ ತನಿಖೆ ನಡೆಸಲಿದೆ” ಎಂದಿದ್ದಾರೆ.
“ಮುಂಬರುವ ಏಳು ದಿನಗಳಲ್ಲಿ (ಜಿಲ್ಲಾ ಕೇಂದ್ರಗಳು ಮತ್ತು ತಹಸಿಲ್ ಕೇಂದ್ರಗಳು) ಸುರಕ್ಷಿತ ಸ್ಥಳಗಳಲ್ಲಿ ಅವರೆಲ್ಲರನ್ನೂ ಪೋಸ್ಟ್ ಮಾಡಲಾಗುವುದು. ಘಟನೆಯ ಸ್ಥಳದಲ್ಲಿ ಅವರು ನನ್ನ ಕಾರ್ಯದರ್ಶ ಬಳಿ ಎತ್ತಿರುವ ಸಮಸ್ಯೆಗಳನ್ನು ಖಂಡಿತವಾಗಿಯೂ ಕಾಲಾನುಕ್ರಮದಲ್ಲಿ ಪರಿಹರಿಸಲಾಗುವುದು. ನಾವು ಸಂಪೂರ್ಣವಾಗಿ ಅವರೊಂದಿಗೆ ಇದ್ದೇವೆ ಮತ್ತು ಅವರ ನೋವನ್ನು ಅರ್ಥಮಾಡಿಕೊಳ್ಳುತ್ತೇವೆ. ಅವರು ತಂಗಿರುವ ಸ್ಥಳಗಳಲ್ಲಿ ಭದ್ರತೆಯನ್ನು ಒದಗಿಸಲಾಗುವುದು, ಈ ಅವಧಿಯಲ್ಲಿ ತಾಳ್ಮೆ ಮತ್ತು ಶಾಂತಿಯನ್ನು ಕಾಪಾಡಿ ಎಂದು ಉದ್ಯೋಗಿಗಳಿಗೆ ಮನವಿ ಮಾಡಿಡುತ್ತೇನೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.