ನವದೆಹಲಿ: ಪಾಕಿಸ್ಥಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಮುಂದುವರಿದಿರುವ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪೇಶಾವರದಲ್ಲಿ ನಿನ್ನೆ ಇಬ್ಬರು ಸಿಖ್ಖರನ್ನು ಹತ್ಯೆ ಮಾಡಲಾಗಿದೆ.
ಈ ಘಟನೆ ಬಗ್ಗೆ ಭಾರತವು ಪಾಕಿಸ್ಥಾನ ಸರ್ಕಾರದೊಂದಿಗೆ ತನ್ನ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ.
ಪಾಕಿಸ್ತಾನದ ಪೇಶಾವರದಲ್ಲಿ ಇಬ್ಬರು ಸಿಖ್ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ನಡೆದ ಹತ್ಯೆಗೈಯ ಕುರಿತು ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಪಾಕಿಸ್ಥಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಪೇಶಾವರದಲ್ಲಿ ಅಪರಿಚಿತ ಶಸ್ತ್ರಧಾರಿಗಳು ಇಬ್ಬರು ಸಿಖ್ ವ್ಯಾಪಾರಿಗಳನ್ನು ಬರ್ಬರವಾಗಿ ಕೊಂದಿರುವ ವರದಿಗಳನ್ನು ನಾವು ನೋಡಿದ್ದೇವೆ ಮತ್ತು ದುಃಖಕರವೆಂದರೆ ಇದು ಮೊದಲ ಅಥವಾ ಅಪರೂಪದ ಘಟನೆಯಲ್ಲ. ಈ ಆಘಾತಕಾರಿ ಮತ್ತು ಶೋಚನೀಯ ಘಟನೆಗೆ ಭಾರತೀಯ ನಾಗರಿಕ ಸಮಾಜದ ವಿವಿಧ ಭಾಗಗಳು ಮತ್ತು ಸಿಖ್ ಸಮುದಾಯದಿಂದ ತೀವ್ರ ಕಳವಳ ವ್ಯಕ್ತವಾಗಿದೆ. ಈ ವಿಷಯದ ಬಗ್ಗೆ ಪ್ರಾಮಾಣಿಕವಾಗಿ ತನಿಖೆ ನಡೆಸಲು ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತವು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದೆ” ಎಂದಿದ್ದಾರೆ.
ಪಾಕಿಸ್ಥಾನ ಸರ್ಕಾರವು ತನ್ನ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸುತ್ತದೆ ಎಂದು ಭಾರತ ನಿರೀಕ್ಷಿಸುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.