ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದಲ್ಲಿರುವ 27 ಹಿಂದೂ ಮತ್ತು ಜೈನ ದೇವಾಲಯಗಳ ಪುನಃಸ್ಥಾಪನೆಗೆ ಸಂಬಂಧಿಸಿದಂತೆ ಸಾಕೇತ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ನ್ಯಾಯಾಲಯವು ಮಂಗಳವಾರ ಇದರ ವಿಚಾರಣೆಯನ್ನು ಕುತುಬ್ ಮಿನಾರ್ ಸಂಕೀರ್ಣದಲ್ಲಿರುವ 27 ಹಿಂದೂ ಮುಂದೂಡಿದೆ.
ಮೆಹ್ರೌಲಿಯಲ್ಲಿರುವ ಕುತುಬ್ ಮಿನಾರ್ ಸಂಕೀರ್ಣದೊಳಗೆ ಇರುವ ಕುವ್ವಾತ್-ಉಲ್-ಇಸ್ಲಾಂ ಮಸೀದಿಯನ್ನು ದೇವಾಲಯದ ಸಂಕೀರ್ಣದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮೇಲ್ಮನವಿ ಸಲ್ಲಿಸಲಾಗಿದೆ.
ಜೈನರ ತೀರ್ಥಂಕರ ಭಗವಾನ್ ರಿಷಭ್ ದೇವ್ ಮತ್ತು ಹಿಂದೂ ದೇವರು ಭಗವಾನ್ ವಿಷ್ಣು ಪರವಾಗಿ ಸಲ್ಲಿಸಲಾದ ಮೊಕದ್ದಮೆಯು 27 ದೇವಾಲಯಗಳನ್ನು ಒಳಗೊಂಡಿರುವ ಆಪಾದಿತ ದೇವಾಲಯದ ಸಂಕೀರ್ಣವನ್ನು ಮರುಸ್ಥಾಪಿಸುವಂತೆ ಕೋರಿದೆ. ಈ ವಿಷಯವು ಈಗ ಮೇ 24 ರಂದು ಮುಂದಿನ ವಿಚಾರಣೆಗೆ ಬರಲಿದೆ.
ಭಾರತೀಯ ಪುರಾತತ್ವ ಇಲಾಖೆ (ASI) ಪ್ರಕಾರ 27 ಹಿಂದೂ ಮತ್ತು ಜೈನ ದೇವಾಲಯಗಳನ್ನು ಕೆಡವಿ ಅದರ ವಸ್ತುಗಳನ್ನು ಮರುಬಳಕೆ ಮಾಡುವ ಮೂಲಕ ಸಂಕೀರ್ಣದೊಳಗೆ ಕುವ್ವಾತ್-ಉಲ್-ಇಸ್ಲಾಂ ಮಸೀದಿಯನ್ನು ನಿರ್ಮಿಸಲಾಯಿತು.
ಇದೀಗ ಕೆಡವಲಾದ ದೇವಾಲಯಗಳನ್ನು ಪುನಃಸ್ಥಾಪಿಸುವಂತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.