ನವದೆಹಲಿ: ಅಮರನಾಥ ಯಾತ್ರೆಗೆ ಆಗಮಿಸುವ ಯಾತ್ರಾರ್ಥಿಗಳು ಯಾವುದೇ ತೊಂದರೆಯಾಗದಂತೆ ದರ್ಶನ ಪಡೆಯುವುದನ್ನು ಖಚಿತಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅಮರನಾಥ ಯಾತ್ರೆಯ ಸಿದ್ಧತೆಗಳನ್ನು ಶಾ ಪರಿಶೀಲಿಸಿದರು. ಅಮರನಾಥ ಯಾತ್ರಿಗಳ ಸಂಚಾರ, ವಸತಿ, ವಿದ್ಯುತ್, ನೀರು, ಸಂಪರ್ಕ, ಆರೋಗ್ಯ ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳಿಗೆ ವ್ಯವಸ್ಥೆ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು.
ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ಇದು ಮೊದಲ ಯಾತ್ರೆಯಾಗಿದೆ ಎಂದ ಶಾ, ಉತ್ತಮ ಸಂವಹನ ಮತ್ತು ಮಾಹಿತಿ ಪ್ರಸಾರಕ್ಕಾಗಿ ಯಾತ್ರೆಯ ಮಾರ್ಗದಲ್ಲಿ ಮೊಬೈಲ್ ಟವರ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಭೂಕುಸಿತದ ಸಂದರ್ಭದಲ್ಲಿ ತಕ್ಷಣವೇ ಮಾರ್ಗವನ್ನು ತೆರೆಯಲು ಉಪಕರಣಗಳನ್ನು ನಿಯೋಜಿಸುವಂತೆ ಶಾ ಸೂಚನೆ ನೀಡಿದರು. ಯಾವುದೇ ತುರ್ತು ವೈದ್ಯಕೀಯ ಸಂದರ್ಭಗಳನ್ನು ನಿಭಾಯಿಸಲು ಸಾಕಷ್ಟು ಸಂಖ್ಯೆಯ ಆಮ್ಲಜನಕ ಸಿಲಿಂಡರ್ಗಳು, ವೈದ್ಯಕೀಯ ಹಾಸಿಗೆಗಳು, ಆಂಬ್ಯುಲೆನ್ಸ್ಗಳು ಮತ್ತು ಹೆಲಿಕಾಪ್ಟರ್ಗಳು ಇರುವಂತೆ ನೋಡಿಕೊಳ್ಳಲು ಅವರು ನಿರ್ದೇಶನ ನೀಡಿದರು. ಯಾತ್ರಿಗಳ ಅನುಕೂಲಕ್ಕಾಗಿ ಅಮರನಾಥ ಯಾತ್ರೆ ಸಂದರ್ಭದಲ್ಲಿ ಎಲ್ಲ ರೀತಿಯ ಸಾರಿಗೆ ಸೇವೆಗಳನ್ನು ಹೆಚ್ಚಿಸಬೇಕು ಎಂದರು.
ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮಾತನಾಡಿ, ಮೊದಲ ಬಾರಿಗೆ ಪ್ರತಿ ಅಮರನಾಥ ಯಾತ್ರಿಗಳಿಗೆ ರೇಡಿಯೋ ಫ್ರಿಕ್ವೆನ್ಸಿ ಗುರುತು ಮತ್ತು RFID ಕಾರ್ಡ್ ನೀಡಲಾಗುತ್ತದೆ ಮತ್ತು ಐದು ಲಕ್ಷ ರೂಪಾಯಿಗಳಿಗೆ ವಿಮೆ ಮಾಡಲಾಗುತ್ತದೆ ಎಂದು ಹೇಳಿದರು.
ಯಾತ್ರೆಯ ಪ್ರಯಾಣದ ಮಾರ್ಗದಲ್ಲಿ ಟೆಂಟ್ ಸಿಟಿ, ವೈಫೈ ಹಾಟ್ಸ್ಪಾಟ್ಗಳು ಮತ್ತು ಸರಿಯಾದ ಬೆಳಕಿನ ವ್ಯವಸ್ಥೆ ಮಾಡಲಾಗುವುದು. ಇದರೊಂದಿಗೆ ಆನ್ಲೈನ್ನಲ್ಲಿ ಬಾಬಾ ಬರ್ಫಾನಿ ದರ್ಶನ, ಪವಿತ್ರ ಅಮರನಾಥ ಗುಹೆಯಲ್ಲಿ ಬೆಳಗ್ಗೆ ಮತ್ತು ಸಂಜೆ ಆರತಿ ನೇರ ಪ್ರಸಾರ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೇಸ್ ಕ್ಯಾಂಪ್ನಲ್ಲಿ ಆಯೋಜಿಸಲಾಗುವುದು ಎಂದು ಅವರು ಹೇಳಿದರು.
ಅಮರನಾಥ ಯಾತ್ರೆ ಜೂನ್ 30ರಂದು ಆರಂಭಗೊಂಡು ಆಗಸ್ಟ್ 11ಕ್ಕೆ ಅಂತ್ಯಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.