ನವದೆಹಲಿ: ಭಾರತೀಯ ರೈಲ್ವೆಯು ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಬಸ್ಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಬೇರೊಂದು ರಾಜ್ಯಕ್ಕೆ ರವಾನಿಸುವ ಮಹತ್ವದ ಯೋಜನೆಯನ್ನು ಆರಂಭಿಸಿದೆ.
ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಮೊದಲ ಬಾರಿಗೆ ಪ್ರಯಾಣಿಕರ ಬಸ್ಗಳನ್ನು ರೈಲಿನ ಮೂಲಕ ಸಾಗಿಸಲಾಗುತ್ತಿದೆ. ಈ ಮೂಲಕ ಭಾರತೀಯ ರೈಲ್ವೆ ಸರಕು ಸಾಗಣೆಯ ಹೊಸ ಉಪಕ್ರಮಕ್ಕೆ ಮುಂದಾಗಿದೆ ಎಂದು ಹೇಳಿದೆ.
ಈ ಸಂಬಂಧ ವಿಡಿಯೋವೊಂದನ್ನು ರೈಲ್ವೆ ಬಿಡುಗಡೆ ಮಾಡಿದ್ದು, ಇದರಲ್ಲಿ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಳಕೆಗಾಗಿ ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಅಶೋಕ್ ಲೇಲ್ಯಾಂಡ್ ಬಸ್ ಗಳನ್ನು ರೈಲಿನ ಮೂಲಕ ಸಾಗಿಸುತ್ತಿರುವುದನ್ನು ನಾವು ಕಾಣಬಹುದು.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಮೊದಲ ಬಾರಿಗೆ ಪ್ರಯಾಣಿಕರ ಬಸ್ ಗಳನ್ನು ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Buses on Train!
Transporting passenger buses for the first time. pic.twitter.com/QWggwXfww1
— Ashwini Vaishnaw (@AshwiniVaishnaw) May 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.