ನವದೆಹಲಿ: ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಆರ್ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಮೇಲೆ ರೈಲ್ವೆ ಉದ್ಯೋಗ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಹೊಸ ಪ್ರಕರಣವನ್ನು ದಾಖಲಿಸಿದೆ.
ಮೇವು ಹಗರಣದಲ್ಲಿ ಬಿಡುಗಡೆಯಾದ ಕೆಲವೇ ದಿನಗಳ ನಂತರ ಅವರ ಮೇಲೆ ಹೊಸ ಪ್ರಕರಣ ದಾಖಲಾಗಿದೆ.
ರೈಲ್ವೇಯಲ್ಲಿ ಉದ್ಯೋಗಕ್ಕಾಗಿ ಆಕಾಂಕ್ಷಿಗಳಿಂದ ಭೂಮಿಯನ್ನು ಪಡೆದ ಆರೋಪವನ್ನು ಲಾಲು ವಿರುದ್ಧ ಸಿಬಿಐ ಹೊರಿಸಿದೆ. ಲಾಲು ಪ್ರಸಾದ್ ಯಾದವ್ ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಅವಧಿಗೆ ಸಂಬಂಧಿಸಿದ ಹಗರಣ ಇದಾಗಿದೆ.
ವರದಿಗಳ ಪ್ರಕಾರ, ಸಿಬಿಐ ಲಾಲು ಅವರ ಪುತ್ರಿ ಮಿಸಾ ಭಾರ್ತಿ ಅವರ ವಿರುದ್ಧವೂ ಪ್ರಕರಣ ದಾಖಲಿಸಿದೆ. ಏತನ್ಮಧ್ಯೆ, ಲಾಲು ಪ್ರಸಾದ್ ಯಾದವ್ಗೆ ಸಂಬಂಧಿಸಿದ ದೆಹಲಿ ಮತ್ತು ಬಿಹಾರದ 17 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸುತ್ತಿದೆ. ಪಾಟ್ನಾದಲ್ಲಿರುವ ಲಾಲು ಯಾದವ್ ಅವರ ಪತ್ನಿ ರಾಬ್ರಿ ದೇವಿ ಅವರ ನಿವಾಸದ ಮೇಲೂ ದಾಳಿ ನಡೆದಿದೆ.
“ಯಾದವ್ ಅವರು ಕೇಂದ್ರ ಸಚಿವರಾಗಿದ್ದಾಗ ಮುಗ್ಧ ಜನರಿಗೆ ತಮ್ಮ ಸಹಾಯಕರ ಮೂಲಕ ಅಥವಾ ನೇರವಾಗಿ ಸರ್ಕಾರಿ ಉದ್ಯೋಗ ಪಡೆಯಲು ಸಹಾಯ ಮಾಡುವುದಾಗಿ ತಿಳಿಸಿ ಉದ್ಯೋಗಾಕಾಂಕ್ಷಿಗಳಿಂದ ಭೂಮಿಯನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಎಲ್ಲರಿಗೂ ಕೆಲಸ ನೀಡುತ್ತಿರಲಿಲ್ಲ” ಎಂದು ವರದಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.