ಜಮ್ಮು: ಜಮ್ಮುವಿನ ಸರ್ಕಾರಿ ಗಾಂಧಿ ಸ್ಮಾರಕ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಶುಕ್ರವಾರ ಹನುಮಾನ್ ಚಾಲೀಸಾವನ್ನು ಪಠಿಸಿ ಸ್ಥಳೀಯ ಮಸೀದಿಯಲ್ಲಿ ಧ್ವನಿವರ್ಧಕವನ್ನು ಬಳಸುವುದನ್ನು ವಿರೋಧಿಸಿದರು ಎಂದು ಮೂಲಗಳು ತಿಳಿಸಿವೆ.
ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹನುಮಾನ್ ಚಾಲೀಸಾವನ್ನು ಪಠಿಸದಂತೆ ತಡೆದು, 12ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ಬಿಡುಗಡೆ ಮಾಡಿದ್ದಾರೆ.
ಅಧಿಕಾರಿಗಳ ಪ್ರಕಾರ, ವಿದ್ಯಾರ್ಥಿಗಳು ತರಗತಿ ಕೊಠಡಿಗಳಲ್ಲಿ ಓದುತ್ತಿದ್ದ ವೇಳೆಯೇ ಸ್ಥಳೀಯ ಮಸೀದಿಯಲ್ಲಿ ಧ್ವನಿವರ್ಧಕವನ್ನು ಬಳಸಲಾಗುತ್ತಿತ್ತು, ಇದರಿಂದಾಗಿ ಅವರ ಅಧ್ಯಯನಕ್ಕೆ ತೊಂದರೆಯಾಗುತ್ತದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಲೌಡ್ ಸ್ಪೀಕರ್ ಬಳಕೆ ಉಲ್ಲಂಘನೆ ಮತ್ತು ಅದನ್ನು ತಡೆಯಲು ಅಧಿಕಾರಿಗಳು ವಿಫಲವಾದ ಬಗ್ಗೆ ಕೋಪಗೊಂಡ ವಿದ್ಯಾರ್ಥಿಗಳು ‘ಹನುಮಾನ್ ಚಾಲೀಸಾ’ ಪಠಣವನ್ನು ನಡೆಸಿದ್ದಾರೆ ಎನ್ನಲಾಗಿದೆ.
ಜಮ್ಮು ಮುನ್ಸಿಪಲ್ ಕಾರ್ಪೊರೇಷನ್ (ಜೆಎಂಸಿ) ಮಂಗಳವಾರ ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಿಂದ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುವ ಧ್ವನಿವರ್ಧಕ ವ್ಯವಸ್ಥೆಯನ್ನು ತೆಗೆದುಹಾಕುವ ನಿರ್ಣಯವನ್ನು ಅಂಗೀಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.