ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದ್ವೇಷದಿಂದಾಗಿ ಭಾರತದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಲಂಡನ್ ಸಮಾವೇಶದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, “ಭಾರತ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಇದೆ. ಆಡಳಿತ ಪಕ್ಷ ದೇಶದಲ್ಲಿ ಸೀಮೆಎಣ್ಣೆ ಹರಡಿದೆ. ಇನ್ನು ಕಿಡಿ ಹೊತ್ತಿಕೊಳ್ಳಲು ಅಷ್ಟೇ ಬಾಕಿ ಮತ್ತು ನಾವು ದೊಡ್ಡ ಸಮಸ್ಯೆಗೆ ಸಿಲುಕಿದ್ದೇವೆ” ಎಂದು ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ರಾಹುಲ್ ಗಾಂಧಿ ಅವರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಗೌರವ್ ಭಾಟಿಯ ಅವರು, “1984ರ ಸಿಖ್ ವಿರೋಧಿ ದಂಗೆಯನ್ನು ಪ್ರಚೋದಿಸಲು ಕಾಂಗ್ರೆಸ್ ಸೀಮೆಎಣ್ಣೆ ಸುರಿದಿತ್ತು. ನಿರಾಶವಾದಿ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ, ಅರೆಕಾಲಿಕ ಮತ್ತು ವಿಫಲ ನಾಯಕ. ಅವರು ವಿದೇಶಗಳಲ್ಲಿ ಭಾರತದ ಬಗ್ಗೆ ನಕಾರಾತ್ಮಕ ಮಾತುಗಳನ್ನೇ ಆಡುತ್ತಾರೆ” ಎಂದಿದ್ದಾರೆ.
“ವಿದೇಶದಲ್ಲಿ ಪದೇ ಪದೇ ಈ ರೀತಿಯಾಗಿ ಭಾರತದ ಘನತೆ ಹಾಳು ಮಾಡುವ ಹೇಳಿಕೆ ನೀಡಿರುವುದು ದೇಶದ್ರೋಹ ಎಂದರೆ ತಪ್ಪಾಗಲಾರದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.