ನವದೆಹಲಿ: ಇಂದು ಯೋಗ ಹಾಗೂ ಯುವಜನತೆ ಭಾರತದ ಗುರುತಾಗಿದೆ. ಜಗತ್ತು ಭಾರತದ ಸ್ಟಾರ್ಟ್ಅಪ್ಗಳನ್ನು ತನ್ನ ಭವಿಷ್ಯ ಎಂದು ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮೈಸೂರು ಕರ್ನಾಟಕದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ 80 ನೇ ಜನ್ಮದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.
ದೇಶದ ಉದ್ಯಮ ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮವು ಜಾಗತಿಕ ಬೆಳವಣಿಗೆಯ ಭರವಸೆಯ ಕಿರಣವಾಗಿ ಹೊರಹೊಮ್ಮುತ್ತಿದೆ. ನಿರ್ಣಯಗಳನ್ನು ಸಾಧಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಒತ್ತು ನೀಡಬೇಕು. ಈ ದಿಸೆಯಲ್ಲಿಯೂ ಆಧ್ಯಾತ್ಮಿಕ ಕೇಂದ್ರಗಳು ಸ್ಫೂರ್ತಿಯ ಕೇಂದ್ರಗಳಾಗಬೇಕು ಎಂದು ಕರೆ ನೀಡಿದರು.
ಪ್ರಕೃತಿ ಸಂರಕ್ಷಣೆ ಮತ್ತು ಪಕ್ಷಿಗಳ ಸೇವೆಯಲ್ಲಿ ದತ್ತ ಪೀಠದ ಅಪಾರ ಕಾರ್ಯವನ್ನು ಶ್ಲಾಘಿಸಿದ ಪ್ರಧಾನಿ, ನೀರು ಮತ್ತು ನದಿ ಸಂರಕ್ಷಣೆಗಾಗಿ ಕೆಲಸ ಮಾಡುವಂತೆಯೂ ವಿನಂತಿಸಿದರು.
ಪ್ರತಿ ಜಿಲ್ಲೆಯಲ್ಲಿ 75 ಅಮೃತ ಸರೋವರಗಳನ್ನು ಅಭಿವೃದ್ಧಿಪಡಿಸುವ ಅಭಿಯಾನದಲ್ಲಿ ಕೊಡುಗೆಯನ್ನು ನೀಡುವಂತೆ ಕೇಳಿದರು. ಸ್ವಚ್ಛ ಭಾರತ್ ಮಿಷನ್ನಲ್ಲಿ ಪೀಠದ ಕೊಡುಗೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.
ಈ ಶುಭ ಸಂದರ್ಭದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿ ಜೀ ಮತ್ತು ಅವರ ಅನುಯಾಯಿಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ ಮೋದಿ, ಸಂತರು ಮತ್ತು ವಿಶೇಷ ಅತಿಥಿಗಳಿಂದ ನಡೆದ ‘ಹನುಮಂತ ದ್ವಾರ’ ಪ್ರವೇಶ ಕಮಾನು ಸಮರ್ಪಣೆಯನ್ನು ವೀಕ್ಷಿಸಿದರು.
‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ ಮತ್ತು ಸಬ್ಕಾ ಪ್ರಯಾಸ್’ ಎಂಬ ಮಂತ್ರದೊಂದಿಗೆ ದೇಶವು ಸಾಮೂಹಿಕ ಪ್ರತಿಜ್ಞೆಗಳಿಗೆ ಕರೆ ನೀಡುತ್ತಿದೆ. ಇಂದು ದೇಶವು ತನ್ನ ಪ್ರಾಚೀನತೆಯನ್ನು ಸಂರಕ್ಷಿಸುತ್ತಿದೆ ಮತ್ತು ಅದನ್ನು ಉತ್ತೇಜಿಸುತ್ತಿದೆ ಮತ್ತು ನಾವೀನ್ಯತೆ ಮತ್ತು ಆಧುನಿಕತೆಗೆ ಬಲವನ್ನು ನೀಡುತ್ತಿದೆ” ಎಂದು ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.