ಲಕ್ನೋ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಈದ್ ಸಂದರ್ಭದಲ್ಲಿ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಯೋಗಿ ತಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಪಾಲನೆಯನ್ನು ಎತ್ತಿ ತೋರಿಸಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ ರಾಮನವಮಿ ಸಂದರ್ಭದಲ್ಲಿ ಯಾವುದೇ ಕೋಮು ಘರ್ಷಣೆಗಳು ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
“ಉತ್ತರ ಪ್ರದೇಶದಲ್ಲಿ ರಾಮನವಮಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ರಾಜ್ಯದಲ್ಲಿ ಎಲ್ಲಿಯೂ ಹಿಂಸಾಚಾರ ನಡೆದಿಲ್ಲ. ಉತ್ತರಪ್ರದೇಶದಲ್ಲಿ ಮೊದಲ ಬಾರಿಗೆ ಈದ್ ಮತ್ತು ಅಲ್ವಿದಾ ಜುಮಾ (ರಂಜಾನ್ನ ಕೊನೆಯ ಶುಕ್ರವಾರ) ನಮಾಜ್ ಅನ್ನು ರಸ್ತೆಯಲ್ಲಿ ನಡೆಸಲಾಗಿಲ್ಲ” ಎಂದು ಯೋಗಿ ಭಾನುವಾರ ಹೇಳಿದ್ದಾರೆ.
ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗರುವುದನ್ನು ಶ್ಲಾಘಿಸಿದ ಅವರು, 2017ರಿಂದ ಇಲ್ಲಿಯವರೆಗೆ ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ಗಲಭೆ ಘಟನೆ ನಡೆದಿಲ್ಲ ಎಂದಿದ್ದಾರೆ.
ಈ ಹಿಂದೆ ಮುಜಾಫರ್ನಗರ, ಮೀರತ್, ಮೊರಾದಾಬಾದ್ ಮತ್ತಿತರ ಕಡೆಗಳಲ್ಲಿ ಗಲಭೆಗಳು ನಡೆಯುತ್ತಿದ್ದವು. ತಿಂಗಳುಗಟ್ಟಲೆ ಕರ್ಫ್ಯೂ ಇರುತ್ತಿತ್ತು. ಆದರೆ, ಕಳೆದ ಐದು ವರ್ಷಗಳಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ.
“ನಮ್ಮ ಸರ್ಕಾರ ರಾಜ್ಯದಲ್ಲಿನ ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿದೆ. ಗೋವುಗಳನ್ನು ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿಡಲು ನಾವು ರಾಜ್ಯದಲ್ಲಿ ಗೋಶಾಲೆಯನ್ನು ನಿರ್ಮಿಸಿದ್ದೇವೆ. ನಾವು ಧಾರ್ಮಿಕ ಸ್ಥಳಗಳಿಂದ ಧ್ವನಿವರ್ಧಕಗಳನ್ನು ಸಹ ತೆಗೆದುಹಾಕಿದ್ದೇವೆ. ನಮ್ಮ ಸರ್ಕಾರವು 700 ಕ್ಕೂ ಹೆಚ್ಚು ಧಾರ್ಮಿಕ ಸ್ಥಳಗಳನ್ನು ಪುನರ್ನಿರ್ಮಿಸಿದೆ” ಎಂದು ಯೋಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.