ದಾವೋಸ್: ಗೋಧಿ ರಫ್ತಿನ ಮೇಲಿನ ನಿಷೇಧವನ್ನು ಮರುಪರಿಶೀಲಿಸುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥ ಕ್ರಿಸ್ಟಲಿನಾ ಜಾರ್ಜಿವಾ ಅವರು ಭಾರತಕ್ಕೆ ಮನವಿ ಮಾಡಿದ್ದಾರೆ,
ಅಂತಾರಾಷ್ಟ್ರೀಯ ಆಹಾರ ಭದ್ರತೆ ಮತ್ತು ಜಾಗತಿಕ ಸ್ಥಿರತೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ.
“ಭಾರತವು ಸುಮಾರು 1.35 ಶತಕೋಟಿ ಜನರಿಗೆ ಆಹಾರವನ್ನು ನೀಡಬೇಕಾಗಿದೆ ಎಂಬ ಅಂಶದ ಬಗ್ಗೆ ಮತ್ತು ಭಾರತದ ಕೃಷಿ ಉತ್ಪಾದಕತೆಯನ್ನು ಬಿಸಿಲ ಬೇಗೆ ಕಡಿಮೆ ಮಾಡಿದೆ ಎಂಬ ಬಗ್ಗೆ ನನಗೆ ಅರಿವಿದೆ, ಆದರೆ ಹೆಚ್ಚಿನ ದೇಶಗಳು ಭಾರತ ರಫ್ತನ್ನು ಅವಲಂಬಿಸಿರುವ ಕಾರಣ ಸಾಧ್ಯವಾದಷ್ಟು ಬೇಗ ಈ ಬಗ್ಗೆ ಮರುಪರಿಶೀಲಿಸುವಂತೆ ನಾನು ಭಾರತವನ್ನು ಬೇಡಿಕೊಳ್ಳುತ್ತೇನೆ. ರಫ್ತು ನಿರ್ಬಂಧಗಳು ಬಿಕ್ಕಟ್ಟು ಸೃಷ್ಟಿಸುತ್ತದೆ”ಎಂದು ಅವರು ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಹೇಳಿದ್ದಾರೆ.
“ಯುಕ್ರೇನ್ ಮತ್ತು ರಷ್ಯಾವು ಯುದ್ಧದಿಂದ ಪ್ರಭಾವಿತವಾಗಿರುವ ಅಂಶಗಳಲ್ಲಿ ಗೋಧಿ ಕೂಡ ಒಂದಾಗಿದೆ, ಆದ್ದರಿಂದ ಭಾರತ ಎಷ್ಟು ರಫ್ತು ಮಾಡಬಹುದು ಮತ್ತು ಎಲ್ಲಿಗೆ ರಫ್ತು ಮಾಡಬಹುದು ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತದೆ. ವಿಶೇಷವಾಗಿ ರಫ್ತುಗಳು ಈಜಿಪ್ಟ್ ಅಥವಾ ಲೆಬನಾನ್ನಂತಹ ತೀವ್ರವಾಗಿ ಪ್ರಭಾವಿತವಾಗಿರುವ ದೇಶಗಳಿಗೆ ಹೋದರೆ ಗಮನಾರ್ಹ ಪರಿಣಾಮ ಬೀರಬಹುದು, ಅಲ್ಲಿ ನಾವು ಹಸಿವಿನ ಅಪಾಯ ಮಾತ್ರವಲ್ಲದೆ ಸಾಮಾಜಿಕ ಅಶಾಂತಿಯ ಅಪಾಯ ಮತ್ತು ಜಾಗತಿಕ ಸ್ಥಿರತೆಯ ಮೇಲೆ ಪರಿಣಾಮ ಬೀರುವ ಅಪಾಯವನ್ನು ನೋಡುತ್ತಿದ್ದೇವೆ” ಎಂದಿದ್ದಾರೆ.
ಭಾರತವು ಈ ತಿಂಗಳ ಆರಂಭದಲ್ಲಿ ಗೋಧಿ ರಫ್ತುಗಳನ್ನು ನಿಷೇಧಿಸಿದೆ. ತೀವ್ರವಾದ ಶಾಖದ ಅಲೆಯು ಗೋಧಿ ಉತ್ಪಾದನೆಯನ್ನು ಕುಂಠಿತ ಮಾಡಿದೆ ಮತ್ತು ದೇಶೀಯ ಬೆಲೆಗಳು ದಾಖಲೆಯ ಏರಿಕೆಯನ್ನು ತಲುಪುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.